ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ರಾಜ್ಯ ಸರ್ಕಾರವು ಕೆಲವೊಂದು ಮಾರ್ಗಸೂಚಿಗಳನ್ನು ರಚಿಸಿದ್ದು, ಪ್ರಾಥಮಿಕ ಶಾಲೆಗಳಿಗೆ ಮೊದಲು ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಸಾಧ್ಯತೆಯಿದೆ.
ಆರೋಗ್ಯ ಇಲಾಖೆಯು ನಿರ್ಮಿಸಿರುವ ಮಾರ್ಗಸೂಚಿಯ ಪ್ರಕಾರ ಮೂರರ ಹರೆಯದ ತನಕದ ಮಗುವಿಗೆ ಇಲ್ಲಿ ಪ್ರವೇಶ ನೀಡಲಾಗುವುದಿಲ್ಲ. ಕೇವಲ ಐದು ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೆಚ್ಚು ಮಕ್ಕಳಿದ್ದರೆ, ಆಗ ಬ್ಯಾಚ್ ನಲ್ಲಿ ಮಕ್ಕಳನ್ನು ಕರೆಸಲಾಗುತ್ತದೆ.
ಆದರೆ ಅಂಗನವಾಡಿ ಆರಂಭಿಸುವ ದಿನಾಂಕಗಳನ್ನು ಇನ್ನಷ್ಟೇ ಘೋಷಿಸಬೇಕಾಗಿದೆ.
ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಯುಕ್ತ ಆರ್ ಎಸ್ ಪೆಡ್ಡಪ್ಪಯಾ ತಿಳಿಸಿದರು.