News Karnataka Kannada
Monday, May 06 2024
ಬೆಂಗಳೂರು ನಗರ

ರಾಜ್ಯದಲ್ಲಿ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ:ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು : ರಾಜ್ಯದ ಯಾವುದೇ ಭಾಗದಲ್ಲೂ ಈವರೆಗೂ ಕಾನೂನು ಸುವ್ಯವಸ್ಥೆ ಹದಗೆಡಲು ಅವಕಾಶ ಕೊಟ್ಟಿಲ್ಲ, ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ.

ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆ ಹದಗೆಡದಂತೆ ಪ್ರತಿಯೊಬ್ಬರು ಕೂಡ ಸಾಮರಸ್ಯದಿಂದ ಬದುಕಲು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ

ಇನ್ನು ಹಲಾಲ್ ಅಭಿಯಾನದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಇಂತಹ ಸನ್ನಿವೇಶ ಈಗಷ್ಟೇ ಆರಂಭವಾಗಿದೆ. ಇದರ ಸಮಗ್ರತೆಯನ್ನು ಗಮನಿಸಬೇಕಾಗುತ್ತದೆ.

 

ಕೆಲವು ನಿಯಮಗಳು, ಆಚರಣೆಗಳು ಮೊದಲಿಂದಲೂ ಇವೆ. ನಿಯಮಗಳು, ಆಚರಣೆಗಳಂತೆ ನಡೆದುಕೊಂಡು ಹೋಗ್ತಿದೆ. ನಮ್ಮ ಸರ್ಕಾರ ಅಭಿವೃದ್ಧಿಯತ್ತ ಮಾತ್ರ ಗಮನ ಕೊಡುತ್ತೆ.

ಬಲಪಂಥೀಯ ಎಡಪಂಥೀಯ ಅನ್ನೋದು ಇಲ್ಲ. ನಾವು ಶಾಂತಿ, ಜನರ ಭದ್ರತೆ, ಅಭಿವೃದ್ಧಿ ಸಿದ್ಧಾಂತ ನಂಬುತ್ತೇವೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು