ಬೆಂಗಳೂರು : ರಾಜ್ಯದಲ್ಲಿಂದು ಕೊರೊನಾ ಭಾರೀ ಳಿಕೆಯಾಗಿದ್ದು , ಇಂದು 278 ಜನರಿಗೆ ಕೊರೊನಾ ಸೋಂಕು ತಗುಲಿದೆ . ಹಾಗೂ ಕೊರೊನಾ ಸೋಂಕಿಗೆ 3 ಜನರು ಮೃತಪಟ್ಟಿದ್ದಾರೆ .
ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು 3 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಹಾಗೂ 278 ಜನರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು 182 ಜನರಿಗೆ ಸೋಂಕು ತಗುಲಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯ 3286 ಸಕ್ರಿಯ ಪ್ರಕರಣಗಳಿದೆ. ಪಾಸಿಟಿವಿಟಿ ದರ ಶೇ.0.53 ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.