News Karnataka Kannada
Monday, May 06 2024
ಬೆಂಗಳೂರು ನಗರ

ರಾಜ್ಯದಲ್ಲಿ ಓಮಿಕ್ರಾನ್,ಕೊರೋನಾ ಹೆಚ್ಚಳ: ನಾಳೆ ಸಂಜೆ ತಜ್ಞರ ಜೊತೆ ಸಿಎಂ ಚರ್ಚೆ

Bommai (1)
Photo Credit :

ಬೆಂಗಳೂರು : ಅಕ್ಕಪಕ್ಕ ರಾಜ್ಯಗಳಲ್ಲಿ ಹಾಗೂ ಕರ್ನಾಟಕಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್-19 ಹಾಗೂ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಯಾವ ರೀತಿ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತಜ್ಞರ ಜೊತೆ ಚರ್ಚೆಯ ಅವಶ್ಯಕತೆಯಿದೆ.
ಆ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರ ಜೊತೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ನಾಳೆ ಸಂಜೆ ತಜ್ಞರ ಜೊತೆ ಸಭೆ, ಗುರುವಾರ ಸಂಪುಟ ಸಭೆ: ಬೆಂಗಳೂರಿನಲ್ಲಿಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳ ಅಗತ್ಯವನ್ನು ಮನಗಂಡು ತಜ್ಞರ ಜೊತೆ ಮಾತುಕತೆ,ಚರ್ಚೆ ನಡೆಸುತ್ತೇವೆ.ಅವರು ನೀಡಿದ ಸಲಹೆಗಳ ಆಧಾರದ ಮೇಲೆ ಗುರುವಾರ ಸಂಪುಟ ಸಹೋದ್ಯೋಗಿಗಳ ಜೊತೆ ಸಚಿವ ಸಂಪುಟ ನಡೆಸಿ ಚರ್ಚಿಸುತ್ತೇನೆ. ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಒಟ್ಟಾರೆ ಸ್ಥಿತಿಗತಿ, ತೆಗೆದುಕೊಳ್ಳಬೇಕಾದ ದೀರ್ಘಾವಧಿ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬಂದು ಲಾಕ್ ಡೌನ್ ಮಾಡಿ ಆದ ಅನುಭವಗಳು, ಆರೋಗ್ಯ ವ್ಯವಸ್ಥೆ, ಕೋವಿಡ್ ಮುನ್ನೆಚ್ಚರಿಕೆ ಯಾವ ರೀತಿ ತೆಗೆದುಕೊಳ್ಳಬೇಕು ಎಂದು ಸರ್ಕಾರಕ್ಕೆ ಮತ್ತು ಜನತೆಗೆ ಸಹ ಗೊತ್ತಾಗಿದೆ. ಈ ಸಂದರ್ಭದಲ್ಲಿ ಜನರು ಸ್ವ ನಿರ್ಬಂಧ ಹಾಕಿಕೊಳ್ಳಲೇಬೇಕು. ಸ್ವಯಂ ನಿಯಂತ್ರಣ ಮಾಡಿಕೊಂಡು ಆರೋಗ್ಯ ಬಗ್ಗೆ ಎಚ್ಚರಿಕೆ ವಹಿಸದಿದ್ದರೆ ಕಷ್ಟವಾಗುತ್ತದೆ ಎಂದರು. ಮುಂದಿನ ದಿನಗಳಲ್ಲಿ ಓಮಿಕ್ರಾನ್ ಸೋಂಕಿನ ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿಗೆ ತರುವ ಸುಳಿವನ್ನು ಸಿಎಂ ನೀಡಿದ್ದಾರೆ.

ಇಂದು ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ ನೀಡುತ್ತಿದ್ದೇನೆ. ಯುವಜನತೆಯನ್ನು ಕೊರೋನಾ ಸುರಕ್ಷಾ ಚಕ್ರದ ಒಳಗೆ ತರಬೇಕು ಎಂಬುದು ಸರ್ಕಾರದ ಆದ್ಯತೆಯಾಗಿದೆ. ಇದಕ್ಕೆ ಶಿಕ್ಷಕರು, ಪೋಷಕರು, ಮಕ್ಕಳು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು