ಬೆಂಗಳೂರು : ಕೊರೊನಾ ಸೋಂಕಿನಿಂದ ಬೆಂಗಳೂರಿನಲ್ಲಿ ಬಂದ್ ಆಗಿದ್ದ 1 ರಿಂದ 9 ನೇ ತರಗತಿ ವರೆಗಿನ ವಿದ್ಯಾರ್ಥಿಗಳ ತರಗತಿಗಳನ್ನು ಪ್ರಾರಂಭಿಸುವಂತೆ ಶುಕ್ರವಾರ ನಡೆಯುವ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರು ಹೊರತುಪಡಿಸಿ ಇತರೆ ಜಿಲ್ಲೆಗಳಲ್ಲಿ ಈಗಾಗಲೇ ಶಾಲೆಗಳನ್ನು ತೆರೆಯಲು ಅನುಮತಿ ನೀಡಿದ್ದುಉ, ಶಾಲೆಯಲ್ಲಿ ಕೊರೊನಾ ಪ್ರಕರಣ ವರದಿಯಾದರೆ ಮಾತ್ರ ತಾತ್ಕಾಲಿಕವಾಗಿ ಶಾಲೆ ಮುಚ್ಚುವಂತೆ ಸೂಚಿಸಲಾಗಿತ್ತು. ಇದರಂತೆ 27 ಜಿಲ್ಲೆಗಳಲ್ಲಿ 250 ಶಾಲೆಗಳು ಮಾತ್ರ ಬಂದ್ ಆಗಿದ್ದು, ಕೊರೊನಾ ಪ್ರಕರಣ ವರದಿಯಾದ 4 ದಿನ ಮಾತ್ರ ಬಂದ್ ಮಾಡಲಾಗಿದೆ. ಬಳಿಕ ಪುನಃ ತರಗತಿಗಳನ್ನು ಎಂದಿನಂತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.