News Karnataka Kannada
Saturday, April 27 2024
ಬೆಂಗಳೂರು ನಗರ

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ

Curfew
Photo Credit :

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ರಸ್ತೆಗಿಳಿದು ಜನರಿಗೆ ಎಚ್ಚರಿಕೆ ನೀಡಿದರು.

ಇನ್ನು ವೀಕೆಂಡ್ ಕರ್ಫ್ಯೂ, ಸಂಕ್ರಾಂತಿ ಹಬ್ಬ ಇರುವ ಕಾರಣ ಬೆಳಗ್ಗೆಯೇ ತಮ್ಮ ಊರುಗಳನ್ನು ತಲುಪಲು ರೈಲ್ವೆ ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಜನಜಂಗುಳಿ ಸೇರಿತ್ತು. ಮಹಾಮಾರಿ ನಡುವೆ ಇಂದು ರಾಜ್ಯಾದ್ಯಂತ ಸಂಕ್ರಾಂತಿ ಹಬ್ಬದ ಸಡಕರ ಮನೆ ಮಾಡಿದೆ.

ಬಹುತೇಕ ಕಡೆಗಳಲ್ಲಿ ಶುಕ್ರವಾರವೇ ಸಂಕ್ರಾಂತಿ ಆಚರಿಸಿದರೆ ಮತ್ತೆ ಕೆಲವರು ಇಂದು ಆಚರಿಸುತ್ತಿದ್ದಾರೆ. ಶುಕ್ರವಾರ ರಾತ್ರಿ 9:30ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಎಲ್ಲಾ ಅನಗತ್ಯ ಸೇವೆಗಳು, ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿಸಲಾಗಿದೆ.

ವೀಕೆಂಡ್ ಕರ್ಫ್ಯೂ ನಡುವೆ ಹಬ್ಬದ ನೆಪದಲ್ಲಿ ಅನಗತ್ಯವಾಗಿ ರಸ್ತೆಗಿಳಿದರೆ ವಾಹನಗಳನ್ನು ಪೊಲೀಸರು ಸೀಜ್ ಮಾಡಲಿದ್ದಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು