ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಇಂದು ಕಠಿಣ ನಿಯಮಾವಳಿಗಳನ್ನು ಘೋಷಿಸುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ಇತರರ ಸಭೆ ನಡೆಯಲಿದ್ದು, ಇದರ ಬಳಿಕ ನಿರ್ಧಾರ ಹೊರಬೀಳಲಿದೆ.
ಎಲ್ಲಾ ಜಿಲ್ಲೆಗಳಲ್ಲಿ ಈಗ ಕೋವಿಡ್-19 ಗರಿಷ್ಠ ಮಟ್ಟಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ನಿಯಮಾವಳಿಗಳನ್ನು ಜಾರಿಗೆ ಮಾಡಲು ನಿರ್ಧರಿಸಬಹುದು.
ಬೆಂಗಳೂರಿನಲ್ಲಿ ನಿತ್ಯವೂ ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಬರುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿ ಹೆಚ್ಚು ಗಮನಹರಿಸಲಾಗುತ್ತಿದೆ.