ಬೆಂಗಳೂರು: ರಾಜ್ಯದಲ್ಲಿ ಜನವರಿ 10 ರಿಂದ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು.ಕೋವಿಡ್ ಲಸಿಕೆ ಮತ್ತು ಔಷಧಗಳನ್ನು ಬಳಸಿ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತೇವೆ. ಕೋವಿಡ್ 3 ನೇ ಅಲೆ ನಿಭಾಯಿಸಲು ಮುಂದಿನ 2ತಿಂಗಳಿಗೆ ಅಗತ್ಯದಷ್ಟು ಔಷಧ ಶೇಖರಣೆ ಮಾಡಿದ್ದೇವೆ ಎಂದರು.
ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗಲಾಕ್ ಡೌನ್ ಕಳೆದುಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.