ಬೆಂಗಳೂರು: ರಾಜ್ಯದಲ್ಲಿ ದಯವಿಟ್ಟು ರಕ್ತ ಪಾತಕ್ಕೆ ದಾರಿ ಮಾಡಿಕೊಡಬೇಡಿ, ಕೆಲ ಸಂಘಟನೆಗಳಿಂದ ಪ್ರೇರೇಪಿತವಾಗಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಕುರಿತಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ರಾಜ್ಯದಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು, ಇದು ಸಾಮಜಕ್ಕೆ ಒಳ್ಳೆಯದು ಅಲ್ಲ. ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿ, ಪರಿಸ್ಥಿತಿ ನಿಯಂತ್ರಣ ಮಾಡುವಂತ ಕೆಲಸ ಮಾಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ದಯವಿಟ್ಟು ಯುವಕರು ಶಾಂತಿ ಕಾಪಾಡಬೇಕು. ಮಕ್ಕಳಿಗೆ ಪೋಷಕರು ತಿಳಿ ಹೇಳಬೇಕು. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ರಕ್ತಪಾತಕ್ಕೆ ಅವಕಾಶ ಕೊಡಬಾರದು ಎಂಬುದಾಗಿ ಮನವಿ ಮಾಡಿದರು.