ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಶನಿವಾರ 8906 ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,39,958 ಕ್ಕೇರಿದೆ.
ರಾಜ್ಯದಲ್ಲಿ ಜಿಲ್ಲಾವಾರು ಕೊರೊನಾ ಪ್ರಕರಣಗಳನ್ನು ನೋಡಿದ್ದೇ ಆದರೆ ಹಾವೇರಿ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣಗಳಿದ್ದು, ಉಳಿದಂತೆ ಬಾಗಲಕೋಟೆ 6, ಬಳ್ಳಾರಿ 43, ಬೆಳಗಾವಿ 70, ಬೆಂಗಳೂರು ಗ್ರಾಮಾಂತರ 111, ಬೆಂಗಳೂರು ನಗರ 7,113, ಬೀದರ್ 13, ಚಾಮರಾಜನಗರ 10, ಚಿಕ್ಕಬಳ್ಳಾಪುರ 36, ಚಿಕ್ಕಮಗಳೂರು 22, ಚಿತ್ರದುರ್ಗ 15, ದಕ್ಷಿಣಕನ್ನಡ 295, ದಾವಣಗೆರೆ 12, ಧಾರವಾಡ 56, ಗದಗ 16, ಹಾಸನ 139, ಕಲಬುರಗಿ 58, ಕೊಡಗು 26, ಕೋಲಾರ 65, ಕೊಪ್ಪಳ 03, ಮಂಡ್ಯ 183, ಮೈಸೂರು 203, ರಾಯಚೂರು 4, ರಾಮನಗರ 28, ಶಿವಮೊಗ್ಗ 66, ತುಮಕೂರು 53, ಉಡುಪಿ 186, ಉತ್ತರಕನ್ನಡ 52, ವಿಜಯಪುರ 22 ಪ್ರಕರಣ ಪತ್ತೆಯಾಗಿದೆ.
ಶನಿವಾರ 508 ಮಂದಿ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 29,63,056 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿವೆ.ಇದೆಲ್ಲದರ ನಡುವೆ ಓಮಿಕ್ರಾನ್ ಪ್ರಕರಣವೂ ಏರುಗತಿಯಲ್ಲಿ ಸಾಗುತ್ತಿದ್ದು ಒಟ್ಟು 333 ಪ್ರಕರಣಗಳು ರಾಜ್ಯದಲ್ಲಿ ದಾಖಲಾಗಿದೆ.
ಮೈಸೂರಿನಲ್ಲಿ ದ್ವಿಶತಕ ಬಾರಿಸಿದ ಕೊರೊನಾ
ಶನಿವಾರವೂ ಮೈಸೂರಿನಲ್ಲಿ ಕೊರೊನಾ ದ್ವಿಶತಕ ಬಾರಿಸಿದ್ದು, 203 ಮಂದಿಗೆ ಸೋಂಕು ತಗುಲಿ 15 ಮಂದಿ ಗುಣಮುಖವಾಗಿದ್ದಾರೆ.ಶನಿವಾರ ದಿಢೀರನೆ ಏರಿಕೆಯಾಗಿದ್ದ ಸೋಂಕು ಶನಿವಾರವೂ ಮುಂದುವರಿದಿದ್ದು ಒಂದೇ ದಿನ 203 ಮಂದಿಗೆ ಜಾಡ್ಯ ಆವರಿಸಿದೆ. ಮೈಸೂರು ನಗರದಲ್ಲಿ 158, ಕೆ.ಆರ್.ನಗರ 5, ಮೈಸೂರು ತಾಲೂಕು 8, ನಂಜನಗೂಡು 2, ಪಿರಿಯಾಪಟ್ಟಣ 5, ತಿ.ನರಸೀಪುರದಲ್ಲಿ 18, ಹುಣಸೂರು 6, ಹೆಚ್.ಡಿ.ಕೋಟೆಯಲ್ಲಿ 1 ಪ್ರಕರಣ ವರದಿಯಾಗಿದೆೆ. ಸರಗೂರು ಹಾಗೂ ಸಾಲಿಗ್ರಾಮ ತಾಲೂಕಿನಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಮೈಸೂರು ನಗರದ ವಾಣಿ ವಿಲಾಸ ಮೊಹಲ್ಲಾದಲ್ಲಿ 5, ವಿವೇಕಾನಂದ ವೃತ್ತದ 4ನೇ ಮುಖ್ಯ ರಸ್ತೆಯಲ್ಲಿ 6 ಹಾಗೂ ನಜರ್ಬಾದ್ನ ವಾಣಿವಿಲಾಸ ಸ್ಕೂಲ್ನಲ್ಲಿ 7 ಪ್ರಕರಣಗಳು ವರದಿಯಾಗಿದ್ದು, ಕೋವಿಡ್ ಕ್ಲಸ್ಟರ್ಗಳನ್ನಾಗಿ ಮಾಡಿ ನಿಗಾ ವಹಿಸಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೆ 1,80,932 ಮಂದಿಗೆ ಸೋಂಕು ತಗುಲಿದೆ. 15 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 1,77,832ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 672 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 2,428 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.