ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ನವೆಂಬರ್ 26ರಿಂದ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೇಂದ್ರ ಹವಮಾನ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮತ್ತೆ 5 ದಿನಗಳ ಮಳೆಯಾಗಲಿದ್ದು, ಇದು ಕಳೆದ ಬಾರಿಗಿಂತ ಹೆಚ್ಚು ತೀವ್ರವಾಗಿ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.
ತಮಿಳುನಾಡು ಕರಾವಳಿ ಪ್ರವೇಶಿಸಲಿರುವ ಈ ಚಂಡಮಾರುತ ಕರ್ನಾಟಕ ಗಡಿಯನ್ನು ನವೆಂಬರ್ 26ರಂದು ಪ್ರವೇಶಿಸುವ ಸಾಧ್ಯತೆ ಇದೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ತುಮುಕೂರು, ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ