ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ಮಕ್ಕಳು ಬರುವುದನ್ನು ಪೂರ್ಣ ಪ್ರಮಾಣದಲ್ಲಿ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಅನ್ವಯ ಫೆ. 14 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭ
ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಬಿಸಿಯೂಟ ಮತ್ತು ಪೌಷ್ಠಿಕ ಆಹಾರ ವಿತರಣೆ ಶೀಘ್ರವೇ ಮರು ಆರಂಭಗೊಳ್ಳಲಿದೆ.
ಕೋವಿಡ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಬಿಸಿಯೂಟ ತಯಾರಿಸುವುದು ಮತ್ತು ವಿತರಿಸುವುದು ಸೇರಿದಂತೆ ನಾನಾ ಮುನ್ನೆಚ್ಚರಿಕಾ ಅಂಶಗಳ ಕುರಿತು ಸುತ್ತೋಲೆಯನ್ನು ಶೀಘ್ರದಲ್ಲೇ ಹೊರಡಿಸಲಾಗುವುದು. ಈತಿಂಗಳಲ್ಲೇ ಅಂಗನವಾಡಿಗಳಲ್ಲಿ ಬಿಸಿಯೂಟ ವಿತರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರಾದ ಪ್ರಿಯಾಂಕ ಮೇರಿಫ್ರಾನ್ಸಿಸ್ ತಿಳಿಸಿದ್ದಾರೆ.
ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೆ ಮಕ್ಕಳು ಬರುವುದನ್ನು ಪೂರ್ಣ ಪ್ರಮಾಣದಲ್ಲಿ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ಅನ್ವಯ ಫೆ. 14 ರಿಂದ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಿಸಲು ಗುರುವಾರ ಆದೇಶ ಹೊರಡಿಸಿದೆ.