ರಾಜ್ಯದಲ್ಲಿ ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್: ​ಸಚಿವ ಸುನೀಲ್‌ ಕುಮಾರ್​ ಆದೇಶ

 ಬೆಂಗಳೂರು: ರಾಜ್ಯದಲ್ಲಿ ಇನ್ನು ಪ್ರತಿ 3ನೇ ಶನಿವಾರ ವಿದ್ಯುತ್​ ಅದಾಲತ್​ ನಡೆಯಬೇಕೆಂದು ಇಂಧನ ಸಚಿವ ಸುನೀಲ್‌ಕುಮಾರ್​ ಅಧಿಕಾರಿಗಳಿಗೆ ಖಡಕ್​ ಸೂಚನೆ ನೀಡಿದ್ದಾರೆ.

ಈ ಕುರಿತು ಆದೇಶ ಹೊರಡಿಸಿದ ಅವರು, ಪ್ರತಿ ತಿಂಗಳ 3ನೇ ಶನಿವಾರ ಸಹಾಯಕ ಕಾರ್ಯಪಾಲಕ ಇಂಜಿನಿಯರ್​ ಸೇರಿದಂತೆ ಎಲ್ಲ ಅಧಿಕಾರಿಗಳು ತಾಲೂಕಿನ ಕೊನೆ ಹಳ್ಳಿವರೆಗೆ ಭೇಟಿ ನೀಡಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿನ ವಿದ್ಯುತ್​ ಸಮಸ್ಯೆಗಳ ಬಗ್ಗೆ ಅರಿತು, ತಕ್ಷಣ ಪರಿಹಾರ ನೀಡಲು ಕಾರ್ಯಕ್ರಮ ರೂಪಿಸಬೇಕು. ವಿದ್ಯುತ್​ ಅದಾಲತ್​ ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಎಲ್ಲ ಹಳ್ಳಿಗಳಿಗೆ ಭೇಟಿ

ಅದಾಲತ್ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕರಮಟ್ಟದ ಅಧಿಕಾರಿಗಳಿಂದ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ವರೆಗಿನ ಅಧಿಕಾರಿಗಳು ತಾಲೂಕಿನ ಕೊನೇ ಹಳ್ಳಿವರೆಗೆ ಹೋಗಿ, ಸಮಸ್ಯೆ ಆಲಿಸಿ, ಪರಿಹಾರ ನೀಡಬೇಕು. ಎಲ್ಲರೂ ಒಂದೇ ಹಳ್ಳಿಗೆ ಭೇಟಿ ನೀಡದೆ, ಬೇರೆ ಹಳ್ಳಿಗಳಿಗೆ ಭೇಟಿ ನೀಡಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

Sneha Gowda

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

8 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

8 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

8 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

8 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

10 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

10 hours ago