ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಉಂಟಾದ ಹಾನಿ ಕುರಿತು ಮಾಹಿತಿ ಪಡೆಯಲು ಇಂದು ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಂಜೆ 7 ಗಂಟೆಗೆ ಸಭೆ ನಡೆಯಲಿದ್ದು, ಪ್ರವಾಹ, ಬೆಳೆ ಹಾನಿಗೆ ಸಂಬಂಧಿಸಿದಂತೆ ಚರ್ಚಿಸಲು ಹಲವು ಇಲಾಖೆಗಳ ಮುಖ್ಯಸ್ಥರು ಭಾಗವಹಿಸಲಿದ್ದು, ನೆರೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಗೃಹ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ , ಕೃಷಿ , ಸಣ್ಣ ನೀರಾವರಿ, ವಸತಿ ಇಲಾಖೆಗಳ ಮುಖ್ಯಸ್ಥರಿಗೆ ಸಭೆಯಲ್ಲಿ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಅಭಿವೃದ್ಧಿ ಆಯುಕ್ತರಿಗೂ ಸಭೆಗೆ ಹಾಜರಾಗಲು ತಿಳಿಸಲಾಗಿದೆ.