ಬೆಂಗಳೂರು : ವೈಜ್ಞಾನಿಕವಾಗಿ ಯೋಚನೆ ಮಾಡಿ ರಾಜ್ಯದಲ್ಲಿ ಕೋವಿಡ್ ಗೈಡ್ ಜಾರಿ ಮಾಡಿದ್ದೇವೆ. ರಾಜ್ಯದಲ್ಲಿ ಕೊರೊಣಾ ವೈರಸ್ ಸೋಂಕಿನ ಪ್ರಕರಣಗಳ ತೀವ್ರತೆ ಹೆಚ್ಚಾದರೆ ರಾಜ್ಯದಲ್ಲಿ ಮತ್ತೆ ಕಠಿಣ ರೂಲ್ಸ್ ಜಾರಿ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಅವೈಜ್ಞಾನಿಕವಾಗಿ ರೂಲ್ಸ್ ಜಾರಿ ಮಾಡಿದ್ದಾರೆ ಎಂದು ಹೇಳುತ್ತಿದ್ದಾರೆ.ಆದರೆ ವೈಜ್ಞಾನಿಕವಾಗಿ ಯೋಚನೆ ಮಾಡಿ ರಾಜ್ಯದಲ್ಲಿ ಹೊಸ ಗೈಡ್ ಲೈನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕೊರೊನಾ ಮೊದಲ ಅಲೆಯಲ್ಲಿ 100 ಕೇಸ್ ಬಂದ್ರೆ ಲಾಕ್ ಡೌನ್ ಮಾಡಿದ್ದೇವು. 2 ನೇ ಅಲೆಯಲ್ಲಿ 3 ಸಾವಿರ ಕೇಸ್ ದಾಟಿದ ಬಳಿಕ ಲಾಕ್ ಡೌನ್ ಮಾಡಲಾಗಿತ್ತು. ಕೊರೊನಾ 3 ನೇ ಅಲೆಯಲ್ಲಿ 2 ವಾರದ ಬಳಿಕ ವೀಕೆಂಡ್ ಕರ್ಪ್ಯೂ ಜಾರಿ ಮಾಡಿದ್ದೇವೆ. ಇದೆಲ್ಲ ವೈಜ್ಞಾನಿಕವಾಗಿ ಯೋಚನೆ ಮಾಡಿ ಹೊಸ ಗೈಡ್ ಲೈನ್ ಜಾರಿ ಮಾಡಿದ್ದೇವೆ ಎಂದರು.