ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆ ಸೃಷ್ಟಿಸಿದ ಅವಾಂತರ ಒಂದೆರೆಡಲ್ಲ. ರಾಜ್ಯದ ಹಲವು ಪ್ರದೇಶಗಳಿಗೆ ಈ ಮಳೆ ಅಕ್ಷರಶಃ ಕಂಟಕವಾಗಿ ಪರಿಣಿಮಿಸಿದೆ. ಈಗೀರುವಾಗ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಮುಂದಿನ ನಾಲ್ಕು ದಿನ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ವಿಷಯವನ್ನ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರೇ ದೃಢಪಡಿಸಿದ್ದು, ‘ ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಈಗಾಗಲೇ ಇಲ್ಲದ ಅವಾಂತರ ಸೃಷ್ಟಿಸಿದೆ. ಸಾಕಷ್ಟು ಹಾನಿ ಸಂಭವಿಸಿದೆ. ಈ ನಡುವೆ ಹವಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ’ ಎಂದು ತಿಳಿಸಿದ್ರು.
ಇನ್ನು ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಉಂಟಾಗಿರುವ ಹಾನಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಸಂಪೂರ್ಣ ಮನೆ ಹಾನಿಗೆ 5 ಲಕ್ಷ, ಭಾಗಶಃ ಹಾನಿಗೆ 3 ಲಕ್ಷ ಹಾಗೂ ಅಲ್ಪ ಹಾನಿಗೆ 50 ಸಾವಿರ ಪರಿಹಾರ ಘೋಷಿಸಿದೆ.