ಬೆಂಗಳೂರು:ದೇಶದಲ್ಲಿ 3ನೇ ಕೋವಿಡ್ ಅಲೆ ಬರಬಹುದೆಂದು ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯವಾದ ಪೂರ್ವ ಸಿದ್ದತೆಗಳನ್ನು ಕೈಗೊಂಡಿದ್ದೇವೆ,ಕಳೆದ ಒಂದು ವಾರದಿಂದ ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಸಿಯು, ಬೆಡ್ ಸಂಖ್ಯೆ ಹೆಚ್ಚಳ, ಆಕ್ಸಿಜನ್ ಸೇರಿದಂತೆ ಆರೋಗ್ಯ ಕ್ಷೇತ್ರಕ್ಕೆ ಬೇಕಾಗಿರುವ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ,ಹೀಗಾಗಿ ನಾವು ಕೂಡ ಅಗತ್ಯವಾದ ಸಿದ್ದತೆಗಳನ್ನು ಕೈಗೊಳ್ಳುವತ್ತ ಚಿತ್ತ ಹರಿಸಿದ್ದೇವೆ ಎಂದು ತಿಳಿಸಿದರು.
ಕರ್ನಾಕ ಸೇರಿದಂತೆ ಒಟ್ಟು 8 ರಾಜ್ಯಗಳಲ್ಲಿ ಕೋವಿಡ್ ಸಂಖ್ಯೆ ಏರುಮುಖವಾಗುತ್ತಿದೆ ಎಂದು ತಜ್ಞರು ಸಲಹೆ ಮಾಡಿದ್ದಾರೆ. ಯಾವೆಲ್ಲ ಕಟ್ಟೆಚ್ಚರಗಳನ್ನು ವಹಿಸಬೇಕೋ ಅದೆಲ್ಲವನ್ನೂ ಈಗಾಗಲೇ ತೆಗೆದುಕೊಂಡಿದ್ದೇವೆ. ಕೋವಿಡ್ ನಿಯಂತ್ರಿಸಲು ಸರ್ಕಾರ ಸರ್ವಸನ್ನದ್ದವಾಗಿದೆ ಎಂದು ಮಾಹಿತಿ ನೀಡಿದರು.