ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚುವಷ್ಟು ಗಂಭೀರ ಸ್ಥಿತಿ ಇಲ್ಲ. ಹೀಗಾಗಿ ರಾಜ್ಯದಲ್ಲಿ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ. ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರೆಯುತ್ತವೆ. ಮಾರ್ಗಸೂಚಿಗಳ ಪಾಲನೆ ಬಗ್ಗೆ ಬಿಇಒ, ಟಿಹೆಚ್ ಒಗಳು ಮೇಲ್ವೀಚಾರಣೆ ಮಾಡಬೇಕು ಎಂದರು.
ಇನ್ನು 2 ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗಳಿಗೆ ಪ್ರವೇಶವಿಲ್ಲ ಎಂಬ ನಿಯಮ ತರಲು ಆಗಲ್ಲ. ನಾವು ಜಾಗೃತಿ ಮೂಡಿಸಬಹುದಷ್ಟೇ. ಶಾಲೆಗಳನ್ನು ಮುಚ್ಚುವಷ್ಟೂ ಗಂಭೀರ ಸ್ಥಿತಿ ಇಲ್ಲ. ಹೀಗಾಗಿ ಶಾಲೆಗಳಿಗೆ ಹೊಸದಾಗಿ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಹೇಳಿದ್ದಾರೆ.