News Karnataka Kannada
Monday, May 06 2024
ಬೆಂಗಳೂರು ನಗರ

ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

Cm Bommayi
Photo Credit :

ಬೆಂಗಳೂರು: ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಐದು ತಿಂಗಳಿನಿಂದ ಸಂಪನ್ಮೂಲ ಕ್ರೂಢೀಕರಣ ಉತ್ತಮವಾಗಿದೆ.ಇಲಾಖಾವಾರು ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಕೊರೊನಾ ನಡುವೆಯೂ ರಾಜ್ಯ ಸರಕಾರವು ಆರ್ಥಿಕ ಶಿಸ್ತು ಪಾಲಿಸಿದೆ.

ಮುಂದಿನ ವರ್ಷವೂ ಎಪ್ರಿಲ್‌ನಿಂದಲೇ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪ್ರಸಕ್ತ ಸಾಲಿನಲ್ಲಿ 67,100 ಕೋಟಿ ರೂ. ಸಾಲ ಪಡೆಯಬಹುದಾಗಿದ್ದರೂ 63,100 ಕೋಟಿ ರೂ. ಸಾಲವನ್ನಷ್ಟೇ ಪಡೆಯಲಾಗಿದೆ. 2022-23ನೇ ಸಾಲಿನಲ್ಲಿ 2.65 ಲಕ್ಷ ಕೋಟಿ ರೂ. ಮೊತ್ತದ ಬಜೆಟ್‌ ಮಂಡಿಸಲಾಗಿದ್ದು, ಪ್ರಸಕ್ತ ವರ್ಷಕ್ಕೆ ಹೋಲಿಸಿದರೆ ಶೇ. 7.93ರಷ್ಟು ಹೆಚ್ಚಳವಾಗಿದೆ. ಮುಂದಿನ ಸಾಲಿನಲ್ಲಿ ತೆರಿಗೆಯಿಂದ 1.31 ಲಕ್ಷ ಕೋಟಿ ರೂ., ತೆರಿಗೆಯೇತರ ಮೂಲದಿಂದ 10,941 ಕೋಟಿ ರೂ., ಕೇಂದ್ರ ಸರಕಾರದಿಂದ ಸಹಾಯಧನ ರೂಪದಲ್ಲಿ 17,783 ಕೋಟಿ ರೂ., ಕೇಂದ್ರದ ತೆರಿಗೆ ಪಾಲಿನಲ್ಲಿ 29,783 ಕೋಟಿ ರೂ. ಸಂಗ್ರಹವಾಗುವ ಅಂದಾಜು ಮಾಡಲಾಗಿದೆ ಎಂದರು.

ಬಜೆಟ್‌ ಪೂರ್ವದಲ್ಲಿ ಅಮೃತ ನಗರೋತ್ಥಾನ, ರೈತರ ಮಕ್ಕಳಿಗೆ ವಿದ್ಯಾನಿಧಿ ಸೇರಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಅಭಿವೃದ್ಧಿಗೂ ತೊಡಕಾಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ತೆರಿಗೆಯಿಂದ 9,500 ಕೋಟಿ ರೂ. ಹಾಗೂ ತೆರಿಗೆಯೇತರ ಮೂಲದಿಂದ 2,000 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದೆ ಎಂದು ಹೇಳಿದರು. ಮೋಟಾರು ವಾಹನ ತೆರಿಗೆ ಹೊರತುಪಡಿಸಿ ಉಳಿದ ಮೂಲದಿಂದ ಉತ್ತಮ ತೆರಿಗೆ ಸಂಗ್ರಹವಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು