ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕದ ಹೊತ್ತಲ್ಲೇ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸ್ಪೋಟವಾಗಿದ್ದು, ರಾಜ್ಯದಲ್ಲಿ 1 ರಿಂದ 10 ನೇ ತರಗತಿಯ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಸಾರ್ವಜನಿಕ ಬೋಧನಾ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 10 ನೇ ತರಗತಿಗಳ ನಡುವಿನ 130 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಸಾರ್ವಜನಿಕ ಬೋಧನಾ ಇಲಾಖೆ (ಡಿಪಿಐ) ಹೇಳಿದೆ.
ಸೋಮವಾರ ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳಿಂದ ದತ್ತಾಂಶವನ್ನು ಕ್ರೋಢೀಕರಿಸಲಾಗಿದೆ. ಕ್ಲಸ್ಟರ್ ಗಳು ವರದಿಯಾದ ಶಿಕ್ಷಣ ಸಂಸ್ಥೆಗಳು ವರದಿಗಳನ್ನು ಸಲ್ಲಿಸಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಕೋವಿಡ್-19 ಪ್ರಕರಣಗಳು ವರದಿಯಾಗಿವೆ, 92 ಕೋವಿಡ್ ಪ್ರಕರಣಗಳು ಪ್ರಕರಣಗಳು ವರದಿಯಾಗಿವೆ. ಈ ಎಲ್ಲಾ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಸೇರಿದವರಾಗಿದ್ದಾರೆ.