News Karnataka Kannada
Sunday, April 28 2024
ಬೆಂಗಳೂರು ನಗರ

ರಾಜ್ಯದಲ್ಲಿ 8,126 ಮಕ್ಕಳಿಗೆ ಕರೊನಾ ಸೋಂಕು ದೃಢ

ರಾಜ್ಯದಲ್ಲಿ ಈವರೆಗೆ 199 ಜನರಲ್ಲಿ ಜೆಎನ್.1 ದೃಢ ಪಟ್ಟಿದೆ. ಜಿನೋಮಿಕ್ ಸ್ವೀಕೆನ್ಸ್ ವರದಿಯಲ್ಲಿ 199 ಮಂದಿಗೆ ಜೆಎನ್.1 ಸೋಂಕು ತಗುಲಿರೋದು ದೃಢಪಟ್ಟಿದೆ. ಈವರೆಗೆ ಜಿನೋಮ್‌ ಸೀಕ್ವೆನ್ಸ್‌ ಟೆಸ್ಟ್‌ಗೆ 601 ಸ್ಯಾಂಪಲ್ಸ್‌ಗಳ‌ ರವಾನಿಸಲಾಗಿತ್ತು. ಡಿಸೆಂಬರ್ 25ರಂದು ಹೊರ ಬಿದ್ದ ಮೊದಲ ರಿಪೋರ್ಟ್ ನಲ್ಲಿ 60 ಸ್ಯಾಂಪಲ್ ಗಳ ಪೈಕಿ 34 ಮಂದಿಗೆ ಜೆಎನ್ 1 ತಗುಲಿರೋದು ಪತ್ತೆಯಾಗಿದೆ.
Photo Credit :

ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ ತಿಳಿಸಿದ್ದು, ಸಾಧ್ಯವಾಗದ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

ರಾಜ್ಯದಲ್ಲಿ 3ನೇ ಅಲೆಯ ಸೋಂಕು ಉಲ್ಬಣಗೊಳ್ಳುತ್ತಿದ್ದಂತೆ 1 ರಿಂದ 9ನೇ ತರಗತಿಯ ಮಕ್ಕಳಿಗೆ ಸರ್ಕಾರ ರಜೆ ಘೋಷಣೆ ಮಾಡಿದೆ. ಆದರೂ ಮಕ್ಕಳಲ್ಲಿಯೂ ಸೋಂಕು ಏರಿಕೆ ಆಗುತ್ತಿರುವುದು ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಜ.1ರಂದು ಕೇವಲ 120 ಮಕ್ಕಳಿಗೆ ದೃಢಪಟ್ಟಿದ್ದ ಸೋಂಕು, ಜ.10ರಂದು 1,600 ಮಕ್ಕಳಲ್ಲಿ ಕಂಡುಬಂದಿದೆ.

ಆತಂಕ ಹೆಚ್ಚಿಸಿದ ವಿಶ್ಲೇಷಣಾ ವರದಿ: ರಾಜ್ಯ ಕೋವಿಡ್ ವಾರ್ ರೂಮ್ ವತಿಯಿಂದ ಜ.1ರಿಂದ ಜ.7ವರೆಗೆ ವರದಿಯಾದ ಸೋಂಕಿತರ ಲಕ್ಷಣಗಳು, ಆರೋಗ್ಯ ಸ್ಥಿತಿ, ಆಸ್ಪತ್ರೆಗೆ ದಾಖಲಾಗುವವರು ಮತ್ತು ಆಸ್ಪತ್ರೆಗಳಲ್ಲಿ ಆಕ್ಸಿಜನ್ ಅಥವಾ ಐಸಿಯು ಹಾಸಿಗೆಗೆ ದಾಖಲಾಗುವ ರೋಗಿಗಳ ಬಗ್ಗೆ ವಿಶ್ಲೇಷಣಾ ವರದಿ ಸಿದ್ಧಪಡಿಸಿದೆ. ಇದರಲ್ಲಿ ಸೋಂಕು ದೃಢವಾಗುತ್ತಿರುವವರ ಪೈಕಿ ಶೇ.95 ಲಸಿಕೆ ಪಡೆದವರಾಗಿದ್ದು, ಉಳಿದ ಶೇ.5 ಮಂದಿ ಮಾತ್ರ ಲಸಿಕೆ ಪಡೆಯದವರಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಾಗುವ ಮತ್ತು ಗಂಭೀರ ಸ್ಥಿತಿಗೆ ತಲುಪುವವರ ಪೈಕಿ ಲಸಿಕೆ ಪಡೆಯದವರ ಪ್ರಮಾಣ ಅಧಿಕವಾಗಿದೆ. ಈಗ 0-15 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುತ್ತಿಲ್ಲವಾದ್ದರಿಂದ ಇವರಿಗೆ ಸೋಂಕಿನ ಆತಂಕ ಎದುರಾಗಿದೆ.

60 ಸಾವಿರ ಸಕ್ರಿಯ ಪ್ರಕರಣ: ರಾಜ್ಯದಲ್ಲಿ ಸೋಮವಾರ 11,698 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕು ದೃಢತೆ ದರ ಶೇ. 7.77 ತಲುಪಿದೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 60,148ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ ನಾಲ್ಕು ಅಂಕಿ ತಲುಪಿದ್ದು, 10 ಜಿಲ್ಲೆಗಳಲ್ಲಿ ಮೂರಂಕಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,148 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಗುಣಮುಖರ ಸಂಖ್ಯೆ 29.65 ಲಕ್ಷ ಮೀರಿದೆ. ಸೋಂಕಿತರಲ್ಲಿ 4 ಮಂದಿ ಸಾವನ್ನಪ್ಪಿದ್ದು, ಮೃತರ ಒಟ್ಟು ಸಂಖ್ಯೆ 38,374ಕ್ಕೆ ಏರಿಕೆಯಾಗಿದೆ. ಈವರೆಗೂ 30.63 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಬಳಲಿದ್ದಾರೆ. ಬೆಂಗಳೂರು ನಗರದಲ್ಲಿ ಅತೀ ಹೆಚ್ಚು 9,221, ಮಂಡ್ಯ 306, ಮೈಸೂರು 309, ಉಡುಪಿ 219, ದಕ್ಷಿಣ ಕನ್ನಡ 176, ಹಾಸನ 171, ಧಾರವಾಡ 144, ಬೆಂಗಳೂರು ಗ್ರಾಮಾಂತರ 143, ತುಮಕೂರು 139, ಬೆಳಗಾವಿ 129, ಉತ್ತರ ಕನ್ನಡ 100 ಸೋಂಕು ಪ್ರಕರಣಗಳು ವರದಿಯಾಗಿದೆ. ಉಳಿದಂತೆ 18 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ 50ಕ್ಕಿಂತ ಕಡಿಮೆ ವರದಿಯಾಗಿದೆ. ಹಾವೇರಿಯಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ.

ಒಮಿಕ್ರಾನ್ 479ಕ್ಕೆ ಏರಿಕೆ: ರಾಜ್ಯದಲ್ಲಿ ಸೋಮವಾರ 146 ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 479ಕ್ಕೆ ಏರಿಕೆಯಾಗಿದೆ.

ಬೆಂಗಳೂರಲ್ಲಿ ಶೇ.90 ಕೇಸ್: ಪ್ರತಿನಿತ್ಯ ರಾಜ್ಯದಲ್ಲಿ ವರದಿಯಾಗುವ ಒಟ್ಟಾರೆ ಕೋವಿಡ್ ಪ್ರಕರಣಗಳ ಪೈಕಿ ರಾಜಧಾನಿಯಲ್ಲಿಯೇ ಶೇ.85 ಪ್ರಕರಣ ವರದಿ ಆಗುತ್ತಿವೆ. ಈ ಪೈಕಿ 19 ವರ್ಷದೊಳಗಿನ ಮಕ್ಕಳಿಗೆ ದೃಢವಾಗುವ ಪ್ರಕರಣಗಳ ಪೈಕಿ ಶೇ.90 ಬೆಂಗಳೂರು ನಗರ ಜಿಲ್ಲೆಯ ಮಕ್ಕಳಾಗಿದ್ದಾರೆ. ಇಡೀ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸೋಂಕಿತ ಮಕ್ಕಳ ಚಿಕಿತ್ಸೆಗೆ ಐಸಿಯು, ಆಕ್ಸಿಜನ್ ಹಾಗೂ ಜನರಲ್ ಬೆಡ್ ಸೇರಿ ಪ್ರತ್ಯೇಕ ಹಾಸಿಗೆ ವ್ಯವಸ್ಥೆ ಮಾಡಿದೆ. 3ನೇ ಅಲೆ ಕಾಣಿಸಿಕೊಂಡು ನಿತ್ಯ 500 ರಿಂದ 1,200 ಮಕ್ಕಳಿಗೆ ಸೋಂಕು ಪತ್ತೆ ಆಗುತ್ತಿದ್ದರೂ ಕೋವಿಡ್ ಆರೈಕೆ ಕೇಂದ್ರ ಆರಂಭಿಸದೆ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು