ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ. ಇವರಿಗೆ ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದ್ದು, ಅದರಲ್ಲಿ ಕರ್ನಾಟಕ ರಾಜ್ಯವು ಒಂದಾಗಿದೆ.
ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ. ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.