ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 14 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಕೋಲಾರ, ಹಾಸನ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಬೀದರ್, ಕಲಬುರ್ಗಿ, ರಾಯಚೂರು, ಹಾವೇರಿ, ಬೆಳಗಾವಿ, ಯಾದಗಿರಿ, ವಿಜಯಪುರ, ಧಾರವಾಡದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳು ಸೇರಿದಂತೆ ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರಿನಲ್ಲಿ ಇಂದಿನಿಂದ ಡಿಸೆಂಬರ್ 18ರವರೆಗೆ ಒಣ ಹವೆ ಮುಂದುವರೆಯಲಿದೆ.