ಬೆಂಗಳೂರು: ನಗರದ ಪ್ರಮುಖ ರೈಲ್ವೆ ನಿಲ್ದಾಣಗಳು ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಭಾರತದ ವಾಯುಪಡೆಯು ಪಾಕಿಸ್ತಾನದ ಉಗ್ರರ ಅಡಗುತಾಣ ಮೇಲೆ ನಡೆಸಿರುವಂತಹ ದಾಳಿಗೆ ಪ್ರತಿದಾಳಿ ನಡೆಯುವ ಸಾಧ್ಯತೆಯು ಇರುವ ಕಾರಣದಿಂದಾಗಿ ಪ್ರಮುಖ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದಲ್ಲಿ ಇರುವಂತಹ ಪ್ರಮುಖ ರಕ್ಷಣಾ ಕೇಂದ್ರಗಳು, ತರಬೇತಿ ಕೇಂದ್ರಗಳು, ವಿಮಾನ ನಿಲ್ದಾಣ, ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳ ಭದ್ರತೆ ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ಬಸ್ ನಿಲ್ದಾಣ, ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳಲ್ಲಿ ಜನರ ತಪಾಸಣೆ, ವಸ್ತುಗಳ ತಪಾಸಣೆ ಹೆಚ್ಚಾಗಿದೆ.