News Karnataka Kannada
Sunday, May 05 2024
ಬೆಂಗಳೂರು ನಗರ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲೆ ಬಂದ್; ಮತ್ತೆ ತೆರೆಯಲು ಅನುಮತಿ ನೀಡುವಂತೆ ರುಪ್ಸಾ ಮನವಿ

School
Photo Credit : IANS

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆದರೆ, ಕೊರೊನಾ ಇದ್ದಲ್ಲಿ ಮಾತ್ರ ಶಾಲೆಗಳನ್ನು ಬಂದ್ ಮಾಡಿ, ಇನ್ನುಳಿದ ಪ್ರದೇಶಗಳಲ್ಲಿನ ಶಾಲೆಗಳನ್ನು ತೆರೆಯಲು ಅನುಮತಿ ನೀಡಿ ಎಂದು ರುಪ್ಸಾ ಮನವಿ ಮಾಡಿದೆ.

ಈಗಾಗಲೇ ತಜ್ಞರು ಕೂಡ ಮೂರನೇ ಅಲೆಯಲ್ಲಿ ಮಕ್ಕಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದರು. ಅಲ್ಲದೇ, ಶಾಲಾ – ಕಾಲೇಜುಗಳಲ್ಲಿಯೇ ಹೆಚ್ಚಾಗಿ ಸೋಂಕಿತರು ಪತ್ತೆಯಾಗುತ್ತಿದ್ದರು. ಹೀಗಾಗಿ ರಾಜ್ಯದಲ್ಲಿನ 6 ಜಿಲ್ಲೆಗಳ ಶಾಲೆಗಳನ್ನು ಬಂದ್​ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ 1 ರಿಂದ 8 ಅಥವಾ 9 ನೇ ತರಗತಿಯವರೆಗಿನ ಶಾಲೆಗಳನ್ನು ಬಂದ್ ಮಾಡಲಾಗಿದೆ.

ಆದರೆ, ಇದಕ್ಕೆ ರುಪ್ಸಾ ಖಾಸಗಿ ಒಕ್ಕೂಟ ಆಕ್ರೋಶ ವ್ಯಕ್ತಪಡಿಸುತ್ತಿದ್ದು, 5ನೇ ತರಗತಿಯ ಮೇಲ್ಪಟ್ಟ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದೆ. ಅಲ್ಲದೇ, ಕೊರೊನಾ ಬಂದಿರುವ ಶಾಲೆಗಳನ್ನು ಮಾತ್ರ ಬಂದ್ ಮಾಡಿ. ಅದು ಬಿಟ್ಟು ಇಡೀ ಜಿಲ್ಲೆಯಲ್ಲಿ ಈ ನಿಯಮ ಜಾರಿಗೆ ತರುವುದು ಸರಿಯಲ್ಲ ಎಂದು ಸರ್ಕಾರಕ್ಕೆ ಸಲಹೆ ನೀಡಿದೆ.

ಈಗಾಗಲೇ ಬೆಂಗಳೂರು ನಗರ ಸೇರಿದಂತೆ ಬೆಳಗಾವಿ, ಧಾರವಾಡ, ಮೈಸೂರು, ಬಳ್ಳಾರಿ ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದ್ದು, ಇಲ್ಲಿ 5ನೇ ತರಗತಿಯ ಮೇಲ್ಪಟ್ಟ ಶಾಲೆಗಳನ್ನು ತೆರೆಯಬೇಕು ಎಂದು ರುಪ್ಸಾ ಮನವಿ ಮಾಡಿದೆ.

ಶಾಲೆಗಳಲ್ಲಿ ಎಷ್ಟೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತಂದರೂ ಕೊರೊನಾ ಸ್ಫೋಟವಾಗುತ್ತಿರುವುದಕ್ಕೆ ಹಲವೆಡೆ ಪಾಲಕರು ಆತಂಕ ವ್ಯಕ್ತಪಡಿಸುತ್ತಿದ್ದು, ಭೌತಿಕ ತರಗತಿಗಳನ್ನು ಬಂದ್ ಮಾಡುವಂತೆ ಮನವಿ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು