ಬೆಂಗಳೂರು: ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳು ಸೇರಿದಂತೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೋಮವಾರ ಹಾಗೂ ಮಂಗಳವಾರ ಹಗುರದಿಂದ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೇ ಅಂತ ಹವಾಮಾನ ಇಲಾಖೆ ಹೇಳಿದೆ.
ನಾಳೆ ಹಾಸನ, ಕೊಡಗು, ಮಂಡ್ಯ, ಮೈಸೂರು ತುಮಕೂರು ಸೇರಿದಂತೆ ಇತರೆ ಒಂದೆರೆಡು ಕಡೆ ಮಳೆಯಾಗಲಿದ್ದು, ಉಳಿದೆಡೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನಲ್ಲಿ ಸೋಮವಾರದಿಂದ ಮುಂದಿನ ನಾಲ್ಕು ದಿನವೂ ಒಣ ಹವೆ ಇರಲಿದೆ ಎಂದು ಮಾಹಿತಿ ನೀಡಿದೆ.ದಕ್ಷಿಣ ಕನ್ನಡ, ಉಡುಪಿಯ ಜಿಲ್ಲೆಯ ಒಂದೆರಡು ಕಡೆ ಮುಂದಿನ ನಾಲ್ಕು ದಿನಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸೇರಿದಂತೆ . ಉತ್ತರ ಕನ್ನಡದಲ್ಲಿ ಒಣ ಮುಂದುವರೆದಿದೆ.