News Karnataka Kannada
Saturday, April 27 2024
ಬೆಂಗಳೂರು ನಗರ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ: ಸಿಎಂ

Bengaluru: Cm Bommai to visit Haveri, Dharwad districts
Photo Credit :

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ  ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ರಾಜ್ಯದಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಬಗ್ಗೆ ನಿರ್ಧರಿಸಿಲ್ಲ. ಒಂದು ವಾರದ ಬೆಳವಣಿಗೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಕ್ರಿಸ್ ಮಸ್ ಹಾಗೂ ಹೊಸವರ್ಷಾಚರಣೆ ಬಗ್ಗೆಯೂ ಒಂದು ವಾರದ ಬೆಳವಣಿಗೆ ಅವಲೋಕಿಸಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದ್ದಾರೆ.

ಇನ್ನು ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರೆಯಲಿದೆ, ಒಂದು ವಾರದ ಬೆಳವಣಿಗೆ ಅವಲೋಕಿಸಿ ನೈಟ್ ಕರ್ಪ್ಯೂ, ವಿಕೇಂಡ್ ಕರ್ಪ್ಯೂ, ಕ್ರಿಸ್ ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಸದ್ಯಕ್ಕೆ ಯಾವುದೇ ನಿರ್ಬಂಧ ವಿಧಿಸಿಲ್ಲ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು