News Karnataka Kannada
Sunday, May 05 2024
ಬೆಂಗಳೂರು ನಗರ

ರಾಜ್ಯದ 86 ಮಂದಿ ತಾಯ್ನಾಡಿಗೆ ಮರಳಿದ್ದಾರೆ:ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ

Ukraine War Students
Photo Credit :

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಬುಧವಾರ 31 ವಿದ್ಯಾರ್ಥಿಗಳು ಆಗಮಿಸಿದ್ದು, ಇಲ್ಲಿಯವರೆಗೆ 86 ಮಂದಿ ತಾಯ್ನಾಡಿಗೆ ಮರಳಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ ಹೇಳಿದೆ.

ರಾಜ್ಯದಿಂದ ಉಕ್ರೇನಿಗೆ ವೈದ್ಯಕೀಯ ಕೋರ್ಸ್‌ಗಾಗಿ 694 ವಿದ್ಯಾರ್ಥಿಗಳು ತೆರಳಿರುವ ಮಾಹಿತಿ ಇದ್ದು, ಎಲ್ಲರ ಕುಟುಂಬಗಳನ್ನು ಸಂಪರ್ಕಿಸಲು ಆಯಾ ಜಿಲ್ಲಾಡಳಿತಗಳಿಗೆ ಹೊಣೆ ನೀಡಲಾಗಿದೆ. ದೂರವಾಣಿ ಮೂಲಕ 425 ಕುಟುಂಬಗಳೊಂದಿಗೆ ಸಂಪರ್ಕ ಸಾಧಿಸಲಾಗಿದೆ. ಈ ನಡುವೆ ಅಧಿಕಾರಿಗಳು ಖುದ್ದಾಗಿ 314 ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ವಿಪತ್ತು ನಿರ್ವಹಣ ಪ್ರಾಧಿಕಾರದ ಮಾಹಿತಿಯಂತೆ ಬುಧವಾರ 6 ತಂಡಗಳಲ್ಲಿ 31 ವಿದ್ಯಾರ್ಥಿಗಳು ದಿಲ್ಲಿ ಮೂಲಕ ಬೆಂಗಳೂರಿಗೆ ಬಂದಿಳಿದಿದ್ದಾರೆ.

ಉಕ್ರೇನ್‌ನಲ್ಲಿ ಸಿಲುಕಿರುವವರಲ್ಲಿ ಬೆಂಗಳೂರಿನವರೇ ಹೆಚ್ಚಾಗಿದ್ದಾರೆ. ಅಂದರೆ, ಬೆಂಗಳೂರಿನ 427 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಇವರಲ್ಲಿ ದೂರವಾಣಿ ಮೂಲಕ 191 ಮತ್ತು ಅಧಿಕಾರಿಗಳು 106 ಕುಟುಂಬಗಳ ಸಂಪರ್ಕ ಸಾಧಿಸಿದ್ದಾರೆ. ಉಳಿದವರ ಪತ್ತೆಗಾಗಿ ಪ್ರಯತ್ನಿಸಲಾಗುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು