ಬೆಂಗಳೂರು: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿಕೊಂಡಿರುವ ರಾಜ್ಯದ ವಿದ್ಯಾರ್ಥಿಗಳನ್ನು ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಬುಧವಾರ 31 ವಿದ್ಯಾರ್ಥಿಗಳು ಆಗಮಿಸಿದ್ದು, ಇಲ್ಲಿಯವರೆಗೆ 86 ಮಂದಿ ತಾಯ್ನಾಡಿಗೆ ಮರಳಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣ ಪ್ರಾಧಿಕಾರ ಹೇಳಿದೆ.
ಉಕ್ರೇನ್ನಲ್ಲಿ ಸಿಲುಕಿರುವವರಲ್ಲಿ ಬೆಂಗಳೂರಿನವರೇ ಹೆಚ್ಚಾಗಿದ್ದಾರೆ. ಅಂದರೆ, ಬೆಂಗಳೂರಿನ 427 ವಿದ್ಯಾರ್ಥಿಗಳು ಉಕ್ರೇನ್ನ ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿದ್ದಾರೆ. ಇವರಲ್ಲಿ ದೂರವಾಣಿ ಮೂಲಕ 191 ಮತ್ತು ಅಧಿಕಾರಿಗಳು 106 ಕುಟುಂಬಗಳ ಸಂಪರ್ಕ ಸಾಧಿಸಿದ್ದಾರೆ. ಉಳಿದವರ ಪತ್ತೆಗಾಗಿ ಪ್ರಯತ್ನಿಸಲಾಗುತ್ತಿದೆ.