News Karnataka Kannada
Sunday, May 05 2024
ಬೆಂಗಳೂರು ನಗರ

ರಾಜ್ಯಸಭೆ ಮಾದರಿಯಲ್ಲಿ ಮೇಲ್ಮನೆ ಕಲಾಪಕ್ಕೆ ತೀರ್ಮಾನ

Basappa Horahatti
Photo Credit :

ಬೆಂಗಳೂರು: ರಾಜ್ಯಸಭೆಯಲ್ಲಿ ನಡೆಯುವ ಮಾದರಿಯಲ್ಲಿಯೇ ವಿಧಾನ ಪರಿಷತ್ತಿನ ಕಲಾಪಗಳನ್ನು ಇನ್ನು ಮುಂದೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಫೆ.14ರಿಂದ ಕರ್ನಾಟಕ ವಿಧಾನ ಮಂಡಲದ ಅಧಿವೇಶನವು ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸಭೆಯಲ್ಲಿ ಅನುಸರಿಸುವ ನಿಯಮಗಳು, ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕೆಂದಿದ್ದೇವೆ. ಈ ಸಂಬಂಧ ರಾಜ್ಯಸಭೆ ಅಧಿವೇಶನ ನಡೆಯುವ ವೇಳೆ ದೆಹಲಿಗೆ ತೆರಳಿ ಅಲ್ಲಿನ ಕಾರ್ಯಕಲಾಪಗಳನ್ನು ವೀಕ್ಷಿಸಿ ಆ ಪದ್ದತಿಯನ್ನು ನಾವು ಅಳವಡಿಸಿ ಕೊಳ್ಳಬೇಕೆಂದಿದ್ದೇವೆ ಎಂದು ತಿಳಿಸಿದ್ದಾರೆ.

ವಿಧಾನ ಪರಿಷತ್‌ಗೆ ತನ್ನದೇ ಆದ ಘನತೆ, ಗೌರವ ಇದೆ. ಇಲ್ಲಿ ಮಹತ್ವ ವಿಷಯಗಳು ಚರ್ಚೆ ಆಗುತ್ತವೆ. ಕೆಳಮನೆಯಲ್ಲಿ ಚರ್ಚಿತವಾದ ವಿಷಯಗಳು, ಅನುಮೋದನೆಯಾದ ವಿಧೇಯಕಗಳ ಮೇಲೆ  ಮೇಲ್ಮನೆ ಅಂದರೆ ವಿಧಾನ ಪರಿಷತ್ತಿನಲ್ಲಿ ಸವಿವರವಾಗಿ ಚರ್ಚೆಯಾಗಿ ಅನುಮೋದನೆಗೊಳ್ಳುತ್ತವೆ.  ಹೀಗಿರುವ ಸಮಯದಲ್ಲಿ ಸದನದ ಕಾರ್ಯಕಲಾಪಗಳಿಗೆ ಯಾವುದೇ ಧಕ್ಕೆ ಬರದ ಹಾಗೆ ಎಲ್ಲಾ ಶಾಸಕರು ಸಹಕರಿಸಿ ಕೂಲಂಕುಶವಾಗಿ ವಿಷಯಗಳನ್ನು ಚರ್ಚಿಸಿ ನಾಡಿನ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಿ, ಮೇಲ್ಮನೆಯ ಘನತೆಯನ್ನು ಹೆಚ್ಚಿಸುವ ರೀತಿಯಲ್ಲಿ ಕಲಾಪಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಅವರು ಹೇಳಿದ್ದಾರೆ.

ವಿಧಾನ ಮಂಡಲದ ಅಧಿವೇಶನವು ಆರಂಭದ ದಿನ ವಿಧಾನ ಮಂಡಲದ ಅಧಿವೇಶನದಲ್ಲಿ ಮೊದಲಿಗೆ ರಾಜ್ಯಪಾಲರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿರುವರು, ನಂತರ ವಿಧಾನ ಪರಿಷತ್ತಿನಲ್ಲಿ ಕಲಾಪಗಳು ಮುಂದುವರೆಯಲಿವೆ. ಮೊದಲ ದಿನ ಅಗಲಿದ ಗಣ್ಯರುಗಳಿಗೆ ಸಂತಾಪ ಸೂಚಕ ನಿರ್ಣಯವನ್ನು ಮಂಡಿಸಲಾಗುವುದು. ತದ ನಂತರ ರಾಜ್ಯಪಾಲರ ಭಾಷಣದ ಮೇಲೆ ವಿಸ್ತತ ಚರ್ಚೆ ನಡೆಸಿ, ವಂದನಾ ನಿರ್ಣಯವನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು