ಬೆಂಗಳೂರು: ಮೇ 16ರಿಂದ ರಾಜ್ಯಾದ್ಯಂತ ಶೈಕ್ಷಣಿಕ ವರ್ಷಾರಂಭ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅವರು ಬುಧವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಈ ಬಗ್ಗೆ ಮಾಹಿತಿ ನೀಡಿದರು.ಇದೇ ವೇಳೆ ಅವರು ಮಾತನಾಡಿ, ಕೋವಿಡ್ ಕಾರಣದಿಂದಾಗಿ ನಮ್ಮ ಮಕ್ಕಳ ಕಲಿಕ ಮಟ್ಟ, ಆ ತರಗತಿಯ ಮಟ್ಟಕ್ಕೆ ಇಲ್ಲ ಎನ್ನುವುದು ನಮ್ಮ ಸರ್ವೆಗಳಲ್ಲಿ, ಕೇಂದ್ರ ಸೇರಿದಂತೆ ಎನ್ಜಿಓ ನಡೆಸಿದ ಸರ್ವೆಗಳಲ್ಲಿ ಕಂಡು ಬಂದಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನಲೆಯಲ್ಲಿ, ರಾಜ್ಯದ ಎಲ್ಲಾ ಅಧಿಕಾರಿಗಳು ಸಭೆ ನಡೆಸಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, 2022-23ನೇ ಶೈಕ್ಷಣಿಕ ಸಾಲಿನಲ್ಲಿ 1-9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಯಲಿದೆ.
ಈ ಬಾರಿ 15 ದಿನಗಳ ರಜೆಯನ್ನು ಕಡಿತ ಮಾಡಿದ್ದು, ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು, ಪ್ರತಿನಿಧಿಗಳ ಸಹಕಾರ ಸಿಕ್ಕಿದೆ. ಮುಂದಿನ ಶೈಕ್ಷಣಿಕ ಸಾಲು ಮೇ 16 ರಿಂದ ಶಾಲೆಗಳು ಪ್ರಾರಂಭವಾಗಲಿದ್ದು, ಆ ದಿನಗಳು ಕಲಿಕಾ ಚೇತರಿಕೆಯನ್ನು ನಡೆಸಲಿದ್ದು, ಅದ ಬಳಿಕ ಪ್ರತಿ ದಿನ ನಡೆಸಲಾಗುವುದು, ಇದಲ್ಲದೇ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಕಲಿಕ ಮಟ್ಟವನ್ನು ಹೆಚ್ಚಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.