News Karnataka Kannada
Saturday, May 18 2024
ಬೆಂಗಳೂರು ನಗರ

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಎಲ್ಲ ತರಗತಿಗಳು ಆರಂಭಿಸಲಾಗುವುದು: ಸಚಿವ ಬಿ.ಸಿ ನಾಗೇಶ್‌

Photo Credit : News Kannada

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಾಲೆಗಳನ್ನು ಸೋಮವಾರದಿಂದ ಮತ್ತೆ  ಪುನಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

ಈ ಕುರಿತು ಬೆಂಗಳೂರನಲ್ಲಿ ಮಾತನಾಡಿದ ಸಚಿವರು, ‘ಸೋಮವಾರದಿಂದ ಎಲ್ಲ ತರಗತಿಗಳು ಆರಂಭಿಸಲಾಗುವುದು.ಕೋವಿಡ್‌ ನಿಯಮ ಪಾಲಿಸಿ ಶಾಲೆಗಳ ಪುನಾರಂಭಕ್ಕೆ ಅವಕಾಶ ನೀಡಲಾಗುವುದು’ ಎಂದರು.

ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 146 ಮಕ್ಕಳು ಮಾತ್ರವೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಇನ್ನು ಕೊರೋನಾ ನಿಯಂತ್ರಣಕ್ಕಾಗಿ  ರಾಜ್ಯಾಧ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ರದ್ದುಪಡಿಸಲಾಗಿದೆ. ಇದಲ್ಲದೇ ಹೋಟೆಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್  ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು