News Karnataka Kannada
Thursday, May 09 2024
ಬೆಂಗಳೂರು ನಗರ

ರಾಜ್ಯ ಸರ್ಕಾರಿ ನೌಕರರ ವತಿಯಿಂದ ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ ನಾಳೆ ಪ್ರತಿಭಟನೆ

Photo Credit :

ರಾಜ್ಯ ಸರ್ಕಾರಿ ನೌಕರರ ವತಿಯಿಂದ ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ ನಾಳೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವತಿಯಿಂದ ನೌಕರ-ವಿರೋಧಿ ನೀತಿಗಳನ್ನು ಖಂಡಿಸಿ, ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಹಿರಿಯ ಉಪಾಧ್ಯಕ್ಷ ಎಂ. ವೆಂಕಟೇಶ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಷೇರು ಮಾರುಕಟ್ಟೆ ಆಧಾರಿತ ಎನ್ ಪಿ ಎಸ್ ರದ್ದುಪಡಿಸಿ, ಸುಧಾರಣೆ ನೆಪದಲ್ಲಿ ಇಲಾಖೆ, ಹುದ್ದೆಗಳ‌ ಕಡಿತ,‌ ಪೆನ್ಷನ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಈ ಪ್ರತಿಭಟನೆ ನಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ಒಕ್ಕೂಟದ ‌ಎಲ್ಲ ಜಿಲ್ಲಾ, ತಾಲ್ಲೂಕು ಘಟಕದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿ, ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದರು.

ಅಷ್ಟೇ ಅಲ್ಲದೆ, ಇದರ ಮುಖ್ಯ ಉದ್ದೇಶವಾಗಿ ಕೋವಿಡ್ -19 ನಿಂದಾಗಿ ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದುಗೊಳಿಸಿದ್ದು, ಖಾಲಿ ಹುದ್ದೆ ಭರ್ತಿ ಮಾಡದಿರುವುದು,‌ಕೇಂದ್ರ ಸರ್ಕಾರದ ಕಡ್ಡಾಯ ನಿವೃತ್ತಿ ಕುರಿತ ಆದೇಶ ಸೇರಿ ವಿವಿಧ ಕ್ರಮಗಳಿಂದ ನೌಕರರು‌ ಸಂಕಷ್ಟಕ್ಕೆ ಸಿಲುಕಿದ್ದಾರೆ ಆದ್ದರಿಂದ ಅವರಿಗೆ ಪೂರಕವಾಗುವಂತಹ ಅವಕಾಶಗಳನ್ನು ಕಲ್ಪಿಸಿಕೊಡಲು ಕೇಳುವ ಉದ್ದೇಶವೂ ಇದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು