ಬೆಂಗಳೂರು: ರಾಜ್ಯ ಸರ್ಕಾರದ ಕ್ರಮಗಳಿಂದ ರಾಜ್ಯದಲ್ಲಿ ಕರೊನಾ ವೈರಸ್ ಪ್ರಕರಣಗಳು ಸಂಪೂರ್ಣ ಕಡಿಮೆ ಆಗಿವೆ,ಕರೊನಾ ಪರಿಸ್ಥಿತಿಯಲ್ಲೂ ಸಾಕಷ್ಟು ಕೆಲಸಗಳು ಆಗಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಕಾರ್ಯ ವೈಖರಿಯನ್ನು ಶ್ಲಾಘಿಸಿದರು.
ಸೋಮವಾರ (ಫೆ. 14) ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.ಕನ್ನಡದಲ್ಲೇ ಭಾಷಣ ಆರಂಭಿಸಿದ ರಾಜ್ಯಪಾಲರು ಅಧಿವೇಶನಕ್ಕೆ ಹಾಜರಾದ ಎಲ್ಲರಿಗೂ ಸ್ವಾಗತ ಕೋರಿದರು.
ಕರೊನಾ ಪರಿಸ್ಥಿತಿ ಬಗ್ಗೆ ಮಾತನಾಡಿದ ರಾಜ್ಯಪಾಲರು ರಾಜ್ಯ ಸರ್ಕಾರವು ಯಶಸ್ವಿಯಾಗಿ ಕರೊನಾ ಪರಿಸ್ಥಿತಿಯನ್ನು ನಿರ್ವಹಣೆ ಮಾಡಿದೆ. ಎಲ್ಲರಿಗೂ ಕರೊನಾ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯ ಸರ್ಕಾರದ ಕ್ರಮಗಳಿಂದ ರಾಜ್ಯದಲ್ಲಿ ಕರೊನಾ ಕಡಿಮೆಯಾಗಿದೆ. ಸಾವಿನ ಪ್ರಮಾಣ ಕಡಿಮೆ ಮಾಡುವಲ್ಲಿಯೂ ಸರ್ಕಾರ ಯಶಸ್ವಿಯಾಗಿದೆ. ಇನ್ನೊಂದೆಡೆ ಕರೊನಾ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ. ಶೇ. 100 ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಕರೊನಾ ಪಾಸಿಟಿವ್ ರಿಪೋರ್ಟ್ ಪಡೆದು ಬಂದ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿದೆ. ಹೋಮ್ ಐಸೋಲೇಷನ್ನಲ್ಲಿರುವವರಿಗೆ ವೈದ್ಯರ ಸಲಹೆ ಸೂಕ್ತವಾದ ಸಮಯದಲ್ಲಿ ದೊರೆಯುತ್ತಿದೆ ಎನ್ನುವ ಮೂಲಕ ರಾಜ್ಯ ಸರ್ಕಾರ ಕಾರ್ಯವೈಖರಿಯನ್ನು ಕೊಂಡಾಡಿದರು.