ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಮಂಗಳವಾರ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೋಟಾರು ವಾಹನ ತಿದ್ದುಪಡಿ ಮಸೂದೆ-2017 ವಿರೋಧಿಸಿ ಸಾರಿಗೆ ನೌಕರರು ಇಂದು ಪುರಭವನದ ಮುಂದೆ ಪ್ರತಿಭಟನೆ ನಡೆಸಿದರು. ಆದರೆ ನಗರ ಸಾರಿಗೆ, ಆಟೋ ರಿಕ್ಷಾ, ಓಲಾ, ಉಬರ್ ಕ್ಯಾಬ್ ಗಳು ಎಂದಿನಂತೆ ಸಂಚಾರ ನಡೆಸಿವೆ.
ಮುಷ್ಕರ ಹಿನ್ನೆಲೆಯಲ್ಲಿ ಬಸ್, ಆಟೋ ಸಿಗುವುದಿಲ್ಲವೆನ್ನುವ ಕಾರಣಕ್ಕಾಗಿ ಜನರು ಮೆಟ್ರೋದಲ್ಲಿ ಪ್ರಯಾಣಿಸಿದ ಕಾರಣದಿಂದ ಮೆಟ್ರೋದಲ್ಲಿ ಜನಸಂದಣಿ ಹೆಚ್ಚಾಗಿತ್ತು.