News Karnataka Kannada
Wednesday, May 01 2024
ಬೆಂಗಳೂರು ನಗರ

ರೈತರನ್ನು ಶೋಷಿಸಲು ಯಾರಿಗೂ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ

Photo Credit :

ರೈತರನ್ನು ಶೋಷಿಸಲು ಯಾರಿಗೂ ಅವಕಾಶ ನೀಡುವುದಿಲ್ಲ: ಯಡಿಯೂರಪ್ಪ

ಬೆಂಗಳೂರು: ರೈತ ಸಂಘಟಣೆಗಳು ಕರೆದ ರಾಜ್ಯವ್ಯಾಪಿ ಬಂದ್‍ಗೆ ಹಲವಾರು ಸಂಸ್ಥೆಗಳು ಬೆಂಬಲಿಸುತ್ತಿವೆ. ಈ ಮಧ್ಯೆ ಬಿ.ಎಸ್. ಯಡಿಯೂರಪ್ಪ ರೈತರನ್ನು ಶೋಷಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರು.

ಸಾಮಾಜಿಕ ಮಾಧ್ಯಮ ಮೂಲಕ ಮಾಧ್ಯಮ ಮತ್ತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಪಿಎಂಸಿಗಳು ರಾಜ್ಯದ ರೈತರಿಗೆ ಸೇವೆ ಸಲ್ಲಿಸುತ್ತಲೇ ಇರುತ್ತವೆ. ರಾಜ್ಯದಲ್ಲಿ ಶೀಘ್ರದಲ್ಲಿ ಹೊಸ ಆಡಳಿತ ಪ್ರಾರಂಭವಾಗಲಿದೆ ಎಂದರು.

ಎಪಿಎಂಸಿಗಳನ್ನು ರದ್ದುಗೊಳಿಸಲಾಗುವುದಿಲ್ಲ, ಅವರು ರೈತರಿಗೆ ಸೇವೆ ಸಲ್ಲಿಸುತ್ತಾರೆ. ಆದಾಗ್ಯೂ ಹೊಸ ವ್ಯವಸ್ಥೆಯಿಂದ ಶೇಕಡ 80 ರಷ್ಟು ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಕೆಲವು ವಾರಗಳ ನಂತರ ನಾನು ವೈಯಕ್ತಿಕವಾಗಿ ರೈತರನ್ನು ಭೇಟಿ ಮಾಡುತ್ತೇನೆ. ಯಾರದಾರೂ ರೈತರನ್ನು ಶೋಷಿಸಿರುವುದು ಕಂಡು ಬಂದರೆ ಮೌನವಾಗಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು.

ಒಬ್ಬ ರೈತನ ಮಗನಾಗಿ ಜನಿಸಿದ್ದೇನೆ, ರೈತರ ಆದ್ಯತೆ ಮತ್ತು ಆಸಕ್ತಿಯನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
196
Keerthana Bhat

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು