ಬೆಂಗಳೂರು : ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಲು ಮುಂದಾಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ. ಹಿಂದಿನ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಘೋಷಿಸಿದ್ದ 57 ಸಾವಿರ ರೈತರ ಸಾಲಮನ್ನಾ ಯೋಜನೆ ಕಾರ್ಯರೂಪಕ್ಕೆ ತರಲಿದೆ.
ಈಗಾಗಲೇ ಸಾಲಮನ್ನದ ವಿಚಾರಕ್ಕಾಗಿ ಪರಿಶೀಲನೆಗಳು ಪ್ರಾರಂಭವಾಗಿದ್ದು ಸಾಲ ಮನ್ನಾ ಯೋಜನೆಗೆ ಅರ್ಹರಾಗಿರುವ 60 ಸಾವಿರ ರೈತರ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗಿದೆ. ಜನವರಿ ವೇಳೆಗೆ ಅಂತಿಮ ಪಟ್ಟಿ ಸಿದ್ಧಪಡಿಸಿ ಹಣಕಾಸು ಇಲಾಖೆಗೆ ವರದಿನೀಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.
ಎರಡು ವರ್ಷದಲ್ಲಿ ಮೂರು ಬಾರಿ ದಾಖಲೆಗಳ ಪರಿಶೀಲನೆ ನಡೆದಿದ್ದು,ಇದುವರೆಗೆ 16.49 ಲಕ್ಷ ರೈತರಿಗೆ ಸಾಲಮನ್ನಾ ನೆರವು ದೊರೆತಿದ್ದು, 57 ಸಾವಿರ ರೈತರಿಗೆ ಸಾಲ ಮನ್ನಾ ಯೋಜನೆಯ ಲಾಭ ಸಿಕ್ಕಿರಲಿಲ್ಲ.