ಬೆಂಗಳೂರು ನಗರ

ಕರ್ನಾಟಕದಲ್ಲೇ ತಲೆಎತ್ತಲಿದೆ ದೇಶದ ಲೀಥಿಯಂ ಬ್ಯಾಟರಿ ತಯಾರಿಕೆಯ ಅತಿದೊಡ್ಡ ಕಾರ್ಖಾನೆ

ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ ₹6,000 ಸಾವಿರ ಕೋಟಿ  ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಈ ನಿಟ್ಟಿನಲ್ಲಿ ಗುರುವಾರ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ  ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು,  ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಇದು ದೇಶದಲ್ಲೇ ಅತಿದೊಡ್ಡ ಲಿಥಿಯಂ ಆಧರಿತ ಬ್ಯಾಟರಿ ಕೋಶಗಳನ್ನು ಉತ್ಪಾದಿಸುವ ಗಿಗಾ ಫ್ಯಾಕ್ಟರಿ ಆಗಲಿದೆ ಎಂದು ಕಂಪನಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ ರಾಜ್ಯದಲ್ಲಿ 1,200-1,400 ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ.

ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.

ಕಂಪನಿಗೆ ಸರ್ಕಾರದ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಭರವಸೆ ಇತ್ತಿದ್ದಾರೆ.

ಹಿನ್ನೆಲೆ

ಸ್ವಿಟ್ಜರ್ಲೆಂಡಿನ ಲೀಥಿಯಂ ಕೋಶಗಳ ಉತ್ಪಾದನಾ ಕಂಪನಿಯೊಂದರ ಜತೆ ಜಂಟಿ ಒಪ್ಪಂದ ಹೊಂದಿರುವ ಎಕ್ಸೈಡ್ ಅದಾಗಲೇ ಅಲ್ಲಿ ಕಾರ್ಖಾನೆ ತೆರೆಯುವಲ್ಲಿ ಪಾಲುದಾರನಾಗಿದೆ. ಅಲ್ಲದೇ, ಚೀನಾದ ಎಸ್ವೊಲ್ಟ್ ಎಂಬ ಲೀಥಿಯಂ ಬ್ಯಾಟರಿ ಉತ್ಪಾದನಾ ಸಂಸ್ಥೆ ಜತೆ ತಂತ್ರಜ್ಞಾನ ಸಹಕಾರದ ಒಪ್ಪಂದವನ್ನು ಹೊಂದಿರುವ ಎಕ್ಸೈಡ್ ಈ ದಿಸೆಯಲ್ಲಿ ಈಗಿನ ತಂತ್ರಜ್ಞಾನ ಅಳವಡಿಕೆಯ ಸಾಮರ್ಥ್ಯ ಹೊಂದಿದೆ. ಇತ್ತೀಚೆಗೆ ಕೇಂದ್ರ ಘೋಷಿಸಿರುವ ಉತ್ಪಾದನೆ ಆಧರಿತ ಉತ್ತೇಜನದ ಯೋಜನೆ ಅಡಿ ಪ್ರಸ್ತಾವವನ್ನೂ ಸಲ್ಲಿಸಿರುವ ಈ ಕಂಪನಿ, ‘ರಾಸಾಯನಿಕ ಕೋಶಗಳ ಮುಂದುವರಿದ ತಂತ್ರಜ್ಞಾನ ಮತ್ತು ಬ್ಯಾಟರಿ ಸಂಗ್ರಹ’ ವಿಭಾಗದಲ್ಲಿ ಯೋಜನೆಗಳನ್ನು ತರುವ ಬದ್ಧತೆ ಹೊಂದಿದೆ.

Sneha Gowda

Recent Posts

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

31 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

43 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

60 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago