News Karnataka Kannada
Sunday, May 12 2024
ಬೆಂಗಳೂರು ನಗರ

ಲಂಚ ಬೇಡಿಕೆ ಪ್ರಕರಣ: ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ- ಸಿಎಂ ಬೊಮ್ಮಾಯಿ

Cm Bommai
Photo Credit :

ಬೆಂಗಳೂರು : ‘ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಷರ್ ಮಾಲೀಕರಿಂದ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡ ಪಡೆದ ಪ್ರಕರಣದಲ್ಲಿ ನಿಕಟಪೂರ್ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ ಪಾತ್ರ ಕಂಡುಬಂದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.‌

ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ತಿಬೆಲೆಯ ಆರ್. ಮಂಜುನಾಥ್‌ ಎಂಬವರು ನೀಡಿದ್ದ ದೂರು ಆಧರಿಸಿ ಐಜಿಪಿ ಅವರಿಂದ ತನಿಖೆ ನಡೆಸಲಾಗಿದೆ’ ಎಂದರು.

‘ವಿಜಯಪುರ ಸರ್ಕಲ್ ಇನ್‌ಸ್ಪೆಕ್ಟರ್‌ ಟಿ.ಶ್ರೀನಿವಾಸ್, ಎಎಸ್‌ಐಗಳಾದ ಎನ್. ಶುಭಾ, ಕೆ.ಜಿ. ಅನಿತ ಎಂಬವರ ವಿರುದ್ಧ ದೂರು ಕೇಳಿಬಂದಿತ್ತು. ಈ ಅಧಿಕಾರಿಗಳ ದೂರವಾಣಿ ಕರೆ ಮಾಹಿತಿ ಪಡೆಯಲಾಗಿದೆ. ಕ್ರಷರ್ ಮಾಲೀಕರಿಗೆ ಸಹಾಯ ಮಾಡುವ ಮಾತುಕತೆ ನಡೆಸಿ, ನಂಬಿಸಿ ₹ 5 ಲಕ್ಷ ಪಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಕಾರಣಕ್ಕೆ ಟಿ. ಶ್ರೀನಿವಾಸ್ ಅವರನ್ನು ಅಮಾನತು ಮಾಡಲಾಗಿದೆ. ಎಎಸ್‌ಐಗಳ ವಿರುದ್ಧ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ. ವಿಚಾರಣೆಯಲ್ಲಿ ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಪಾತ್ರ ಕಂಡುಬಂದಿಲ್ಲ’ ಎಂದರು.

ಆದರೆ, ಇದನ್ನು ಒಪ್ಪದ ರವಿಕುಮಾರ್‌, ‘ನನ್ನ ಬಳಿ ಪುರಾವೆಗಳಿವೆ’ ಎಂದರು. ಆಗ ಅದನ್ನು ತನಿಖೆ ಮಾಡಿಸುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು