ಬೆಂಗಳೂರು : ಲಸಿಕೆ ಪಡೆಯದವರಿಗೆ ಸಾರ್ವಜನಿಕ ಪ್ರವೇಶಕ್ಕೆ ನೋ ಎಂಟ್ರಿ ನೀಡದೇ ಇರುವುದಕ್ಕೆ ಮುಂದಾಗಿದೆ ಅಂತ ತಿಳಿದು ಬಂದಿದೆ. ಈ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಅವರು ಶೀಘ್ರದಲ್ಲಿ ಜಾರಿಗೆ ತರಲಿದ್ದು, ಸಿಎಂ ಈಗಾಗಲೇ ಈ ಬಗ್ಗೆ ಗಮನಹರಿಸಲಿದ್ದಾರೆ ಅಂತ ತಿಳಿಸಿದ್ದಾರೆ.
ಲಸಿಕೆ ಹಾಕಿಸಿಕೊಳ್ಳದೇ ಇರುವವರು ಕರೋನ ಸೊಂಕನ್ನು ಹರಡುವ ಸಾಧ್ಯತೆ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಅರಿವು ಮೂಡಿಸಿದ್ರು ಕೂಡ ಯಾರು ಲಸಿಕೆ ಹಾಕಿಸಿಕೊಳ್ಳದೇ ಇರುವುದು ಆತಂಕದ ವಾತಾವರಣ ನಿರ್ಮಾಣವಾಗಿದೆ. ಶಾಲೆ-ಕಾಲೇಜು, ಮಾರುಕಟ್ಟೆ ಸೇರಿದಂತೆ ಇತರೆ ಭಾಗಗಳಲ್ಲಿ ಅಂದ್ರೆ ಹೆಚ್ಚು ಮಂದಿ ಇರುವಂತಹ ಸ್ಥಳಗಳಲ್ಲಿ ಕಡ್ಡಾಯವಾಗಿ ಕರೋನ ವ್ಯಾಕ್ಸಿನ್ ಹಾಕಿಸಿಕೊಂಡವರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ಆದೇಶವನ್ನು ಹೊರಡಿಸಲಿದೆ ಎನ್ನಲಾಗಿದೆ.