News Karnataka Kannada
Friday, May 03 2024
ಬೆಂಗಳೂರು ನಗರ

ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ: ಸಚಿವ ಆರ್‌.ಸುಧಾಕರ್‌

Sudhakar Minister
Photo Credit :

ಬೆಂಗಳೂರು: ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದ್ದಾರೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ ತಿಂಗಳಿನಲ್ಲಿ ಪೀಕ್ ಹಂತಕ್ಕೆ ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಫೀಕ್ ಹಂತಕ್ಕೆ ತಲುಪಿದ ಬಳಿಕ 3-4 ವಾರಗಳಲ್ಲೇ ಕಡಿಮೆ ಆಗಲಿದೆ ಅಂತಾನೂ ತಿಳಿಸಿದ್ದಾರೆ. ಹೀಗಾಗಿ ಜನರು ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು.

ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಕೊರೋನಾ, ಓಮಿಕ್ರಾನ್ ನಿಯಂತ್ರಣ ಸಂಬಂಧ ಸಭೆ ನಡೆಸಿದರು. ಈ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಮಾರ್ಗವಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಹೆಚ್ಚು ಜನಜಂಗುಳಿ ಸೇರದಂತೆ, ಸಭೆ-ಸಮಾರಂಭಗಳನ್ನು ನಿಯಂತ್ರಿಸುವಂತೆ ಸೂಚಿಸಿದ್ದಾರೆ. ಈಗ ಸದ್ಯಕ್ಕೆ ಶೇ.5-6ರಷ್ಟು ಪ್ರಮಾಣದಲ್ಲಿ ಮಾತ್ರವೇ ಸೋಂಕಿತರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈ ಎಲ್ಲಾ ಗಮನಿಸಿದ್ರೇ ಲಾಕ್ ಡೌನ್ ಮೂಲಕ ಕೊರೋನಾ ನಿಯಂತ್ರಣ ಸರಿಯಲ್ಲ ಎನಿಸಿತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು