ಬೆಂಗಳೂರು: ಬಿಜೆಪಿ ಲೋಕಸಭೆ ಚುನಾವಣೆಯ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲು ಯಡಿಯೂರಪ್ಪ ಅವರಿಗೆ ನೀಡಬೇಕೆಂದು ಹೈಕಮಾಂಡ್ ತಿರ್ಮಾನಿಸಿದೆ ಎನ್ನಲಾಗಿದೆ.
ಇದೀಗ ವಿಧಾನ ಸಭೆ ಚುನಾವಣೆಯ ಮೂಲಕ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಹೊಸ ತಂತ್ರಗಳನ್ನು ರೂಪಿಸಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಯಡಿಯೂರಪ್ಪನವರಿಗೆ ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಒಟ್ಟು 28 ಕ್ಷೇತ್ರಗಳಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಪಡೆದುಕೊಳ್ಳಬೇಕೆಂಬ ಗುರಿಯನ್ನು ಹೊಂದಿರುವ ಬಿಜೆಪಿ ಹೊಸ ತಂತ್ರಗಾರಿಯನ್ನು ಹೆಣೆಯುತ್ತಿದೆ.
ಮೊದಲ ಬಾರಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ: ವಿಧಾನಸಭೆ ಚುನಾವಣೆ ಬಳಿಕ ಮೊದಲ ಬಾರಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಜನವಿರೋಧಿ ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಬೇಕೆಂದು ಅವರು ಕರೆ ನೀಡಿದರು.
ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದ ದಿನಗಳಿಂದ ಅಭಿವೃದ್ಧಿ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದ್ದು, ರೈತ ಸಮುದಾಯ ಕಂಗಾಲಾಗಿದೆ. ಯಾವುದೇ ಸೌಲಭ್ಯಗಳು ಜನರಿಗೆ ತಲುಪುತ್ತಿಲ್ಲ. ಸರ್ಕಾರ ಉರುಳುವ ಪರಿಸ್ಥಿಯಲ್ಲಿದೆ ಎಂದರು.