ಬೆಂಗಳೂರು : ಮಗಳು ವರದಕ್ಷಿಣೆ ರೂಪದಲ್ಲಿ ಆಸ್ತಿ ಪಡೆದಿದ್ದರೆ ಅದನ್ನು ಸಹಾ ಆಸ್ತಿ ಪಾಲುದಾರಿಕೆ ದಾವೆ ಹೂಡುವಾಗ ನಮೂದಿಸಬೇಕಾಗುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಬೆಂಗಳೂರಿನ ಹೇಮಲತಾ ಎಂಬುವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ಏಕಸದಸ್ಯ ನ್ಯಾಯಪೀಠ. ಹಿಂದೂ ಉತ್ತರಾಧಿಕಾರ ಕಾಯ್ದೆ ಅಡಿ ಮಗಳು ಆಸ್ತಿ ಪಾಲುದಾರಿಕೆ ಕೋರಿ ಕೋರ್ಟ್ನಲ್ಲಿ ದಾವೆ ಹೂಡಿದರೆ, ವರದಕ್ಷಿಣೆ ಸಮಯದಲ್ಲಿ ನೀಡಲಾದ ಆಸ್ತಿ ವಿವರಗಳನ್ನೂ ದಾವೆಯಲ್ಲಿ ಸೇರಿಸಬೇಕು ಎಂದು ಹೇಳಿದೆ.
ಅವಿಭಕ್ತ ಕುಟುಂಬದ ಆಸ್ತಿಯಲ್ಲಿ ಮಗಳು ಆಸ್ತಿ ಪಡೆದಿದ್ದರೆ ಅದನ್ನು ಆಸ್ತಿ ಪಾಲು ಮಾಡುವ ಸಂದರ್ಭದಲ್ಲಿ ಒಟ್ಟು ಆಸ್ತಿಯಾಗಿ ಪರಿಗಣಿಸಬೇಕಾಗುತ್ತದೆ. ಆಸ್ತಿಯನ್ನು ಸ್ವಂತವಾಗಿ ಖರೀದಿಸಿದ್ದರೆ ಅದನ್ನು ಪಾಲು ದಾವೆಯಲ್ಲಿ ಪರಿಗಣಿಸುವ ಅಗತ್ಯವಿಲ್ಲ ಎಂದು ಕೋರ್ಟ್ ಹೇಳಿದೆ.