ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮನೆ, ನಿವೇಶನರಹಿತ ಬಡವರಿಗೆ ಸೂರು, ವಸತಿ ಬಡಾವಣೆಗಳು ವ್ಯವಸ್ಥೆ ಅಭಿವೃದ್ಧಿ ಉದ್ದೇಶದಿಂದ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಸತಿ ಸೌಲಭ್ಯ ಒದಗಿಸುವುದಕ್ಕೆ ಒತ್ತು ನೀಡಿ, ಗ್ರಾಮೀಣ ಪ್ರದೇಶಗಳಲ್ಲಿ 4 ಲಕ್ಷ, ನಗರ ಪ್ರದೇಶಗಳಲ್ಲಿ 1 ಲಕ್ಷ ಹಾಗೂ ಕೊಳೆಗೇರಿಗಳಲ್ಲಿ97 ಸಾವಿರ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳಾಗಲಿದ್ದು, ರಾಜ್ಯದಲ್ಲಿ ವಸತಿ ಕ್ರಾಂತಿಯಾಗಲಿದೆ ಎಂದರು.
ನಗರ ಪ್ರದೇಶಗಳಲ್ಲಿ ಮೊದಲ ಹಂತದ 46,000 ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ,ಉಳಿದ 64 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಬಡ್ಡಿ ಹೊರೆ ತಪ್ಪಿಸಲು ಫಲಾನುಭವಿಗಳಿಂದ ಕಂತಿನಲ್ಲಿ ಹಣ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.