News Karnataka Kannada
Wednesday, May 01 2024
ಬೆಂಗಳೂರು ನಗರ

ವಸತಿ ರಹಿತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

Cm Basavaraj Bommai
Photo Credit :

ಬೆಂಗಳೂರು : ವಸತಿ ರಹಿತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಮನೆ, ನಿವೇಶನರಹಿತ ಬಡವರಿಗೆ ಸೂರು, ವಸತಿ ಬಡಾವಣೆಗಳು ವ್ಯವಸ್ಥೆ ಅಭಿವೃದ್ಧಿ ಉದ್ದೇಶದಿಂದ ಕಾನೂನು ಸರಳೀಕರಣ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ವಸತಿ ಸೌಲಭ್ಯ ಒದಗಿಸುವುದಕ್ಕೆ ಒತ್ತು ನೀಡಿ, ಗ್ರಾಮೀಣ ಪ್ರದೇಶಗಳಲ್ಲಿ 4 ಲಕ್ಷ, ನಗರ ಪ್ರದೇಶಗಳಲ್ಲಿ 1 ಲಕ್ಷ ಹಾಗೂ ಕೊಳೆಗೇರಿಗಳಲ್ಲಿ97 ಸಾವಿರ ಮನೆಗಳನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಹೆಚ್ಚಿನ ಮನೆಗಳಾಗಲಿದ್ದು, ರಾಜ್ಯದಲ್ಲಿ ವಸತಿ ಕ್ರಾಂತಿಯಾಗಲಿದೆ ಎಂದರು.

ನಗರ ಪ್ರದೇಶಗಳಲ್ಲಿ ಮೊದಲ ಹಂತದ 46,000 ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ,ಉಳಿದ 64 ಸಾವಿರ ಮನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಬೇಕು. ಬಡ್ಡಿ ಹೊರೆ ತಪ್ಪಿಸಲು ಫಲಾನುಭವಿಗಳಿಂದ ಕಂತಿನಲ್ಲಿ ಹಣ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು