ಬೆಂಗಳೂರು : ವಿಕಲಚೇತನ ಮಹಿಳೆಯೋರ್ವರಿಗೆ ಎಎಸ್ಐ ಒಬ್ಬರು ನಡು ರಸ್ತೆಯಲ್ಲಿ ಬೂಟು ಕಾಲಲ್ಲಿ ಒದ್ದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಇದಾಗಿದೆ. ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಮಹಿಳೆ ಕಲ್ಲು ಬೀಸಿದ್ದಾಳೆ. ಅದು ಎಎಸ್ಐ ಮುಖಕ್ಕೆ ತಾಗಿದ್ದು, ರಕ್ತ ಹರಿದಿದೆ. ಸಿಟ್ಟಿನಿಂದ ಟೋಯಿಂಗ್ ವಾಹನದಿಂದ ಕೆಳಗೆ ಇಳಿದು ಬಂದ ಎಎಸ್ಐ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೂಟು ಕಾಲಿನಲ್ಲಿ ಒದ್ದಿದ್ದಾರೆ.
ವೈರಲ್ ವಿಡಿಯೋ
ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಎಎಸ್ಐ, ವಿಕಲಚೇತನ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ. ಬಳಿಕ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ. ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ ಆರೋಪದಡಿ ಮಹಿಳೆಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಕ್ಷಮಿಸಿ ಎಂದ್ರು ಕಿವಿಗೊಡದ ಪೊಲೀಸರು: ವಿಕಲಚೇತನ ಆಗಿರುವುದರಿಂದ ಕ್ಷಮಿಸಿ ಬಿಡಿ ಎಂದು ಸಾರ್ವಜನಿಕರು ಪೊಲೀಸರನ್ನು ಕೇಳಿಕೊಂಡರೂ ಸಹ ಆಕೆಯನ್ನು ಬಿಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.
ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಸಿಟ್ಟು: ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಅಗಲ್ಲ. ಹೀಗಾಗಿ, ಟೋಯಿಂಗ್ ಮಾಡದಂತೆ ಪ್ರತಿ ನಿತ್ಯವೂ ಟೋಯಿಂಗ್ ವಾಹನದ ಮೇಲೆ ಕಲ್ಲು ಎಸೆಯುತ್ತಿದ್ದಳು. ಆದ್ರೆ ಆಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಮೂರು ದಿನದ ಹಿಂದೆ ಆಕೆ ತೂರಿದ ಕಲ್ಲು ಎಎಸ್ಐ ಮುಖಕ್ಕೆ ಬಿದ್ದಿದೆ. ಆ ಸಿಟ್ಟಿನಲ್ಲಿ ಎಎಸ್ಐ ಬೂಟು ಕಾಲಿನಲ್ಲಿ ಒದ್ದು, ಆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ.
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…
ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್ ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.
ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…
ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯು ಬಿಜೆಪಿ ಗೆದ್ದರೆ, ಮಮತಾ ಬ್ಯಾನರ್ಜಿ, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಆರ್ಜೆಡಿ ನಾಯಕ ತೇಜಸ್ವಿ…
ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ