ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮಗ ಯತೀಂದ್ರ ಹಾಗೂ ಕುಟುಂಬ ಸದಸ್ಯರ ಜತೆ ಯುರೋಪ್ ರಾಷ್ಟ್ರಗಳ ಪ್ರವಾಸವನ್ನು ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ತಮ್ಮ ನಿವಾಸದಿಂದ ಹೊರಟ ಸಿದ್ದರಾಮಯ್ಯ ಅವರಿಗೆ ರಾಜಕೀಯ ಮುಖಂಡರು ಹಾಗೂ ಅಪಾರ ಮಂದಿ ಅಭಿಮಾನಿಗಳು ಶುಭಕೋರಿದರು. ಈ ವೇಳೆ ಸಿದ್ದರಾಮಯ್ಯ ಅವರು ಸೂಟ್ ಬೂಟ್ ನ್ನು ಧರಿಸಿ ಮಿಂಚುತ್ತಿದ್ದರು.
ಇನ್ನೂ ತೆರಳುವ ವೇಳೆ ಸಿಎಂ ಕುಮಾರಸ್ವಾಮಿ, ಸಚಿವ ಜಮೀರ್ ಅಹಮ್ಮದ್ ಸೇರಿದಂತೆ ಸಂಪುಟ ಸದಸ್ಯರು ಅಲ್ಲಿ ಕಾಣಿಸಿಕೊಂಡರು. ಇಂದಿನಿಂದ 10 ದಿನಗಳ ಕಾಲ ಸಿದ್ದರಾಮಯ್ಯ ಅವರು ಯುರೋಪ್ ರಾಷ್ಟ್ರಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಆಂಜನೇಯ, ಕಾಂಗ್ರೆಸ್ ಆಡಳಿತದಲ್ಲಿ ಸತತ 5 ವರ್ಷಗಳ ಕಾಲ ದಣಿವರಿಯದೆ ಸಿದ್ದರಾಮಯ್ಯ ಅವರು ದುಡಿದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫಲ ಸಿಗಲಿಲ್ಲ. ಆದರೆ ಅವರು ಕುಂದಿರಲಿಲ್ಲ. ಇದೀಗ ಅವರು ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದ ಅವರು ಸುಗಮವಾಗಿ ಹೋಗಿ ಬರಲಿ ಎಂದು ಶುಭ ಹಾರೈಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ನಲ್ಲಿ ಏನೇನಿದೆ: ಇಂದು ನಾನು ವಿದೇಶ ಪ್ರವಾಸಕ್ಕೆ ಹೊರಟ ಸಂದರ್ಭದಲ್ಲಿ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿ ಶುಭ ಹಾರೈಸಿದರು.