ಬೆಂಗಳೂರು,ಜ.5 : ಕೋವಿಡ್ ನಿಯಂತ್ರಣಕ್ಕಾಗಿ ಪ್ರೌಢಾವಸ್ಥೆಯ ವಿದ್ಯಾರ್ಥಿಗಳು ಮತ್ತು ಯುವಕರಿಗೆ ನೀಡಲಾಗುತ್ತಿರುವ ಲಸಿಕೆ ಅಭಿಯಾನಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ದೊರೆತಿದ್ದು, ಎರಡು ದಿನಗಳಲ್ಲೇ ಶೇ.25ರಷ್ಟು ಗುರಿ ಸಾಧನೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಜಿಲ್ಲಾವಾರು ಲಸಿಕೆ ನೀಡಿದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ರಾಜ್ಯದಲ್ಲಿ 15ರಿಂದ 18 ವರ್ಷ ವಯೋಮಾನದ 31 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ನಿನ್ನೆಯವರೆಗೂ 7.96 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಶೇ.25ರಷ್ಟು ಗುರಿ ಸಾಧನೆಯಾಗಿದೆ. ಮುಂದಿನ 10 ದಿನಗಳ ಒಳಗಾಗಿ ಎಲ್ಲರಿಗೂ ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಚಿವರ ಮಾಹಿತಿಯ ಪ್ರಕಾರ ಚಾಮರಾಜನಗರ ಜಿಲ್ಲೆಯಲ್ಲಿ ಶೇ.42ರಷ್ಟು, ಉತ್ತರ ಕನ್ನಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಶೇ.40ರಷ್ಟು, ಬೆಳ್ಳಗಾಂ, ಬಳ್ಳಾರಿ, ಉಡುಪಿ ಶೇ. 35, ಹಾಸನ, ಬೀದರ್ನಲ್ಲಿ ಶೇ.34, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಶೇ.30ರಷ್ಟು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಶೇ.28, ಬೆಂಗಳೂರುನಗರ, ಧಾರವಾಡ, ಚಿಕ್ಕಬಳ್ಳಾಪುರದಲ್ಲಿ ಶೇ.25, ಕೋಲಾರ, ವಿಜಯಪುರದಲ್ಲಿ ಶೇ.24, ರಾಯಚೂರು, ಕೊಪ್ಪಳ, ಮಂಡ್ಯ ಶೇ.22, ಬೆಂಗಳೂರು ಗ್ರಾಮಾಂತರದಲ್ಲಿ ಶೇ.20, ಮೈಸೂರಿನಲ್ಲಿ ಶೇ.19, ಯಾದಗಿರಿ , ಶಿವಮೊಗ್ಗದಲ್ಲಿ ಶೇ.17, ಗುಲ್ಬರ್ಗ, ರಾಮನಗರದಲ್ಲಿ ಶೇ.17, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.11, ಗದಗದಲ್ಲಿ ಶೇ.10ರಷ್ಟು ಗುರಿ ಸಾಸಲಾಗಿದೆ.