ಬೆಂಗಳೂರು : ವಿದ್ಯುತ್ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡು 52 ವರ್ಷದ ವ್ಯಕ್ತಿ ಮತ್ತು ಅವರ ಮಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್(ಬೆಸ್ಕಾಂ) ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಗುರುವಾರ ಪ್ರಕರಣ ದಾಖಲಿಸಿದ್ದಾರೆ.
ಜ್ಞಾನಭಾರತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಮಂಗನಹಳ್ಳಿ ನಿವಾಸಿ ಶಿವಕುಮಾರ್(52) ಅವರು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.
ಶಿವಕುಮಾರ್ ಅವರು ತಮ್ಮ ಮಗಳು ಚೈತನ್ಯಾ ಅವರ ಮದುವೆಗೆ ಕಲ್ಯಾಣ ಮಂಟಪಕ್ಕೆ ಕಾಯ್ದಿರಿಸಲು ಹೋಗಿದ್ದರು. ಅಲ್ಲಿಂದ ಮನೆಗೆ ವಾಪಸ್ಸಾಗುವಾಗ ಮಧ್ಯಾಹ್ನ 3.15ರ ಸಮಯದಲ್ಲಿ ಮಂಗನಹಳ್ಳಿ ಕ್ರಾಸ್ನಲ್ಲಿ ಟ್ರಾನ್ಸ್ಫಾರ್ಮರ್ ಸ್ಫೋಟಿಸಿದೆ. ತಂದೆ, ಮಗಳು ಸಂಚರಿಸುತ್ತಿದ್ದ ಹೋಂಡಾ ಆಯಕ್ಟೀವಾ ಸ್ಕೂಟರ್ಗೂ ಬೆಂಕಿ ತಗುಲಿದೆ. ಪರಿಣಾಮ ಬೆಂಕಿಯ ಕೆನ್ನಾಲಿಗೆಗೆ ತಂದೆ-ಮಗಳಿಬ್ಬರೂ ಸಿಲುಕಿದ್ದಾರೆ. ಶಿವರಾಜ್ಗೆ ಶೇ.80 ರಷ್ಟು, ಚೈತನ್ಯಾಳಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದವು. ದಾರಿ ಹೋಕರು ಗಮನಿಸಿ, ವಿಕ್ಟೋರಿಯಾ ಆಸ್ಪತ್ರೆಗೆ ಅವರನ್ನು ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.
ಇನ್ನು ಮಂಗನಹಳ್ಳಿ ಬಳಿ ಟ್ರಾನ್ಸ್ಫಾರ್ಮರ್ ಸಿಡಿದು ಮೃತಪಟ್ಟ ತಂದೆ- ಮಗಳ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಇಂಧನ ಸಚಿವ ವಿ. ಸುನೀಲ್ ಕುಮಾರ್ ಅವರು ಹೇಳಿದ್ದಾರೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.