ಬೆಂಗಳೂರು: ತುಮಕೂರು ಜಿಲ್ಲೆಯ ಶಾಲೆಯೊಂದರಲ್ಲಿ ರಾಷ್ಟ್ರಧ್ವಜ ಹಾರಿಸುವ ಸಂದರ್ಭದಲ್ಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟ ಬಾಲಕನ ಪೋಷಕರಿಗೆ ಕೂಡಲೇ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಸಂಬಂಧ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಘಟನೆ ಬಗ್ಗೆ ತನಿಖೆ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಬೇಕು’ ಎಂದು ತಿಳಿಸಿತು.
‘ತುಮಕೂರು ಜಿಲ್ಲೆಯ ಕರಿಕೆರೆ ಗ್ರಾಮದ ಶಾಲೆಯಲ್ಲಿ ಧ್ವಜ ಹಾರಿಸುವ ತಯಾರಿ ನಡೆಸುತ್ತಿದ್ದಾಗ ಧ್ವಜ ಕಂಬಕ್ಕೆ ವಿದ್ಯುತ್ ತಗುಲಿತ್ತು. ಚಂದನ್(16) ಮೃತಪಟ್ಟಿದ್ದು, ಶಶಾಂಕ್ ಮತ್ತು ಪವನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಸರ್ಕಾರದ ಪರ ವಕೀಲರು ಮಾಹಿತಿ ನೀಡಿದರು.
‘ಇಬ್ಬರು ಬಾಲಕರಿಗೆ ಸರಿಯಾದ ಚಿಕಿತ್ಸೆ ದೊರೆಯುತ್ತಿದೆಯೇ ಎಂಬುದನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಚಿಕಿತ್ಸೆ ದೊರೆಯುವಂತೆ ಜಿಲ್ಲಾಧಿಕಾರಿ ನೋಡಿಕೊಳ್ಳಬೇಕು. ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಬೇಕಾಗುತ್ತದೆ’ ಎಂದು ಪೀಠ ಹೇಳಿತು.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…
ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ತಂಡವು ಭಾನುವಾರ…
ಮೇ 18 ರಿಂದ ಮೇ 22 ರ ವರೆಗೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ…
ಪಕ್ಷದ ಕಾರ್ಯಕರ್ತರ ಗದ್ದಲ, ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಸಾಮೂಹಿಕ ನಕಲು ಆಗುತ್ತಿರುವುದನ್ನು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಒಪ್ಪಿಕೊಂಡಿದ್ದಾರೆ. ಈ ಬಾರಿ…
ನಗರದಲ್ಲಿ ಸಂಚರಿಸುವ ನಗರ ಸಾರಿಗೆಯ ಎಲ್ಲ ಬಸ್ಗಳು ಡಾ.ಬಿ.ಆರ್.ಅಂಬೇಡ್ಕರ್ ಮುಖ್ಯ ವೃತ್ತದ ಮೂಲಕ ಹಾದು ಹೋಗುವಂತೆ ಕ್ರಮ ಕೈಗೊಳ್ಳಬೇಕೆಂದು ಎಂದು…